ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆಯಾಗಿ ಜ್ಯೋತಿ ಉದಯ್ ಪೂಜಾರಿ ಆಯ್ಕೆ
ಕೋಟ: ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಈ ಆಯ್ಕೆ ನಡೆಸಿದ್ದು, ಜ್ಯೋತಿ ಉದಯ್ ಪೂಜಾರಿ ಅವರು ಕಳೆದ ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ, ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
