ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ- ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ 202೫-2೬ರ ಸಾಲಿನಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕುಂದಾಪುರ ಇಲ್ಲಿಯ ಶಿಕ್ಷಣ ಸಂಯೋಜಕರಾದ ಶ್ರೀ ರಾಜಾ ಖಾರ್ವಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶೇ. 8೦ ಮತ್ತು ಶೇ.90 ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.
ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ ಹಾಗೂ ಉಪ ಪ್ರಾಂಶುಪಾಲ ಸುಜಯ್ ಕೋಟೆಗಾರ್ ಉಪಸ್ಥಿತರಿದ್ದರು.
ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ ಸ್ವಾಗತಿಸಿ, ಸಹಶಿಕ್ಷಕಿ ಶುಬ್ರತಾ ನಿರೂಪಿಸಿದರು, ವಿದ್ಯಾರ್ಥಿನಿ ಶ್ರಾವಣಿ ಎಮ್ ನಾಯಕ್ ವಂದಿಸಿದರು. ಸಂಗೀತ ಶಿಕ್ಷಕಿ ರಮಣಿಯವರು ಪ್ರಾರ್ಥಿಸಿದರು.
