ಕುಂದಾಪುರ: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ನಿಂದ ಬ್ಯಾರೀಕೇಡ್ ಹಸ್ತಾಂತರ
ಕುಂದಾಪುರ: ನಮ್ಮ ನಾಡ ಒಕ್ಕೂಟ (ರಿ.) ಹಾಗೂ ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ಸಂಚಾರಿ ಪೊಲೀಸ್ ಠಾಣೆ ಗೆ ಬ್ಯಾರಿಕೇಡ್ ಹಸ್ತಾಂತರ ಕಾರ್ಯಕ್ರಮ ಕುಂದಾಪುರದ ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ಜರುಗಿತು.

ಈ ಸಂದರ್ಭ ನಮ್ಮ ನಾಡ ಒಕ್ಕೂಟ ಇದರ ಉಪಾಧ್ಯಕ್ಷ ರಾದ ಹುಸೇನ್ ಹೈಕಾಡಿ, ಪ್ರದಾನ ಕಾರ್ಯದರ್ಶಿ ಮೌ ಝಮಿರ್ ಅಹ್ಮದ್ ರಶಾದಿ, ಖಜಾಂಚಿ ಪೀರು ಮೊಹಮ್ಮದ್ ಉಡುಪಿ, ಕುಂದಾಪುರ ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನೂಪ್ ನಾಯಕ್, ಸುಧಾ ಪ್ರಭು, ಏನ್ ಏನ್ ಓ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ಬಿ ಎಸ್ ಎಫ್ ಉಡುಪಿ, ಸಂಘಟನಾ ಕಾರ್ಯದರ್ಶಿ ನಿಹಾರ್ ಅಹ್ಮದ್, ಸದ್ಯಸ್ಯರಾದ ಶಾಬನ್ ಹಂಗಳೂರ್, ಮನ್ಸೂರ್ ಇಬ್ರಾಹಿಂ, ಕುಂದಾಪುರ ಘಟಕದ ಅಧ್ಯಕ್ಷ ಜಮಾಲ್ ಗುಲ್ವಾಡಿ, ಹೆಬ್ರಿ ಘಟಕದ ಅಧ್ಯಕ್ಷ ಅನ್ವರ್ ಹೊಸಂಗಡಿ ಮೊದಲಾದವರು ಉಪಸ್ಥಿತರಿದ್ದರು.
