ಕುಂದಾಪುರ: ಸರಕಾರಿ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಆರಂಭಿಸಲಾಗಿರುವ ಪೌಷ್ಠಿಕ ಪುನಶ್ಚೇತನ ಕೇಂದ್ರಕ್ಕೆ ಅಗತ್ಯವಿರುವ ಅಡುಗೆ ಪರಿಕರಗಳು ಹಾಗೂ ಶುದ್ದ ಕುಡಿಯುವ ನೀರಿನ ಫಿಲ್ಟರನ್ನು ಎಡ್ವರ್ಡ್ ಮೆಮೋರಿಯಲ್ ರಿಕ್ರಿಯೇಷನ್ ಮತ್ತು ರೀಡಿಂಗ್ ಕ್ಲಬ್ ವತಿಯಿಂದ ಶನಿವಾರ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಸ್ತಾಂತರಿಸಿದರು.
ಈ ಸಂದರ್ಭ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತ, ಎಡ್ವರ್ಡ್ ಮೆಮೋರಿಯಲ್ ರಿಕ್ರಿಯೇಷನ್ ಮತ್ತು ರೀಡಿಂಗ್ ಕ್ಲಬ್ ಅಧ್ಯಕ್ಷ ಸುಭಾಶ್ ಶೆಟ್ಟಿ, ಕಾರ್ಯದರ್ಶಿ, ಸದಸ್ಯರು, ಸರಕಾರಿ ಉಪ ವಿಭಾಗೀಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಪ್ರೇಮಾನಂದ್, ವೈದ್ಯರು, ಸಿಬಂದಿ, ಮತ್ತಿತರರು ಉಪಸ್ಥಿತರಿದ್ದರು.