*ನಾಗರಪಂಚಮಿ: ಸೋಮವಾರ (ನಾಳೆ) ದ.ಕ., ಉಡುಪಿಗೆ ಸಾರ್ವತ್ರಿಕ ರಜೆ*
ಉಡುಪಿ: ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಈ ಬಗ್ಗೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಅಂಜೆ ಆದೇಶ ಹೊರಡಿಸಿದ್ದರೆ, ಉಡುಪಿ ಜಿಲ್ಲಾಧಿಕಾರಿ ತಡರಾತ್ರಿ ಆದೇಶ ನೀಡಿದ್ದಾರೆ. ನಾಗರಪಂಚಮಿ ಪ್ರಯುಕ್ತ ರಜೆ ನೀಡುವ ಹಕ್ಕನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಅಧಿಕಾರಕ್ಕೆ ರಾಜ್ಯ ಸರ್ಕಾರ ನೀಡಿ ಆದೇಶಿಸಿದ ಬಳಿಕ ಉಭಯ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
