ಶಿವಮೊಗ್ಗ ಲೋಕಸಭೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ನಾಮಪತ್ರ ಸಲ್ಲಿಕೆ
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಂದ ಅಧಿಕೃತವಾಗಿ ಸ್ಪರ್ಧಿಸುತ್ತಿರುವ ಗೀತಾ ಶಿವರಾಜಕುಮಾರ್ ಅವರು ಸೋಮವಾರ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಗೀತಾ ನಾಮಪತ್ರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸ್ವೀಕರಿಸಿದರು.

ಈ ಸಂದರ್ಭ ಗೀತಾ ಅವರ ಪತಿ, ನಟ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಬೇಳೂರು ಗೋಪಾಲಕೃಷ್ಣ, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬಿ.ಎಂ ಸುಕುಮಾರ ಶೆಟ್ಟಿ, ಅಡಿಕೆಕೊಡ್ಲು ಉದಯಕುಮಾರ್ ಶೆಟ್ಟಿ, ಎಸ್. ರಾಜು ಪೂಜಾರಿ ಸಹಿತ ಹಲವರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗೀತಾ ಬೆಂಬಲಿಗರು ಜಮಾಯಿಸಿದ್ದರು.