ಇಂದು ಬಿ.ವೈ.ರಾಘವೇಂದ್ರ ನಾಮಪತ್ರ : ಬಿ.ಎಸ್.ಸುರೇಶ್ ಶೆಟ್ಟಿಯವರಿಂದ ವಿಶೇಷ ಪೂಜೆ
ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರೂ ಆದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಎಪ್ರಿಲ್ 18ರಂದು ನಾಮಪತ್ರ ಸಲ್ಲಿಸಿದರು.


ಇದೇ ವೇಳೆಯಲ್ಲಿ ಬೈಂದೂರಿನ ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಲೀಡ್ ಗಾಗಿ ಪ್ರತಿ ಬೂತ್ ಗಳಲ್ಲೂ ಬಿಜೆಪಿ ಕಾರ್ಯಕರ್ತರು ದೇವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಉಡುಪಿ ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಬಿ.ಎಸ್.ಸುರೇಶ್ ಶೆಟ್ಟಿಯವರು ವಿವಿಧ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು.


ಈ ಸಂದರ್ಭ ಭಾರತೀಯ ಜನತಾ ಪಕ್ಷದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
