BlogHighlightsLocal newsOthersState newsTop StoriesTrending

60 ವರ್ಷಗಳಿಂದ ದೇಶದ ಜನತೆಗೆ ಕಾಂಗ್ರೆಸ್ ಕೊಟ್ಟ ಚೊಂಬನ್ನು ಅಕ್ಷಯ ಪಾತ್ರೆ ಮಾಡಿದ್ದು ಮೋದೀಜಿ – ಮಹಿಳಾ ಸಮಾವೇಶ ಉದ್ಘಾಟಿಸಿ ಬಿ.ವೈ.ಆರ್

Aware others:

ಬೈಂದೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದಲ್ಲಿಂದ ನಿರಂತರವಾಗಿ 60 ವರ್ಷಗಳ ತನಕ ಈ ದೇಶದ ಜನರಿಗೆ ಕಾಂಗ್ರೆಸ್ ನೀಡಿದ್ದು ಬರೀ ವೊಂಬು. ಆದರೆ ಆ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಮಾಡಿದ್ದು ಬಿಜೆಪಿ ನೇತೃತ್ವದ ಪ್ರಧಾನ ಮಂತ್ರಿ ನರೇಂದ್ರ‌ ಮೋದೀಜಿಯವರು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಅವರು ಸೋಮವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರದಲ್ಲಿ ಹಮ್ಮಿಕೊಳ್ಳಲಾದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿದೆ. ದೇಶದ ಪ್ರತಿಯೊಬ್ಬ ಹೆಣ್ಣು ಮಗಳಿಗೂ ಪ್ರತಿವರ್ಷ 1 ಲಕ್ಷ ನೀಡುತ್ತೇವೆ ಎಂದು ಹೇಳಿದ್ದಾರೆ. ನಮ್ಮ ದೇಶದಲ್ಲಿ 60 ಲಕ್ಷ ಮಹಿಳೆಯರಿದ್ದಾರೆ. ಅವರೆಲ್ಲರಿಗೂ 1 ಲಕ್ಷ ಹಣ ನೀಡಿದರೆ ಪ್ರತಿ ವರ್ಷ 60 ಲಕ್ಷ ಕೋಟಿ ಹಣ ಬೇಕಾಗುತ್ತದೆ. ಹಾಗಾದರೆ ನಮ್ಮ ದೇಶದ ಬಜೆಟ್ ಇರುವುದೇ 45ಲಕ್ಷ ಕೋಟಿ. ಕುಟುಂಬದ ಓರ್ವ ಹೆಣ್ಣು ಮಗಳಿಗೆ 1 ಲಕ್ಷ ನೀಡಿದರೂ ಸಹ 32 ಲಕ್ಷ ಕೋಟಿ ಹಣ ಬೇಕಾಗುತ್ತದೆ. ಯಾವುದೇ ಅಂಕಿ ಸಂಖ್ಯೆಯಿಲ್ಲದೇ ಕೇವಲ ಬೊಗಳೆ ಬಿಡುತ್ತಾ ಅಧಿಕಾರಕ್ಕಾಗಿ ಮತದಾರರಿಗೆ ಇಲ್ಲಸಲ್ಲದ ಆಮಿಷಗಳನ್ನು ಒಡ್ಡುತ್ತಿದೆ ಎಂದು ದೂರಿದರು. 

ಲೋಕಸಭೆ ಹಾಗೂ ವಿಧಾನ ಸಭೆಯಲ್ಲಿ ಶೇ.33ರಷ್ಟು ಸ್ಥಾನವನ್ನು ಮಹಿಳೆಯರಿಗೆ ನೀಡುವ ಮೂಲಕ ಮಹಿಳಾ ಸಮುದಾಯಕ್ಕೆ ಆದ್ಯತೆಯನ್ನು ನೀಡಿದ್ದು ಬಿಜೆಪಿ ಎಂದ ಅವರು, 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯನವರು ಇಂದು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಅದು ಸಹ ಸಹ ಕೇಂದ್ರದ ಕೊಡುಗೆ ಎಂದರು.

ಮೋದಿ ಸರ್ಕಾರ ಸ್ವಚ್ಚ ಭಾರತ್ ಹೆಸರಿನಲ್ಲಿ ಪ್ರತಿಮನೆಗೆ ಶೌಚಾಲಯ ಜಲಜೀವನ್ ಮಿಷನ್ ಅಡಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರು ಎಲ್.ಪಿ.ಜಿ. ಸಂಪರ್ಕ ಬಡವರಿಗೆ ಮನೆ, ಏಪಿಎಲ್ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ಆಯುಷ್ಮಾನ್ ಕಾರ್ಡ್ ಯೋಜನೆ ನೀಡುವ ಮೂಲಕ ಬಡವರು ಮಧ್ಯಮ ವರ್ಗದವರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕಿ ಭಾರತಿ ಶೆಟ್ಟಿ, ಡಾ. ರಾಜನಂದಿನಿ, ಗಾಯತ್ರಿ ಮಲ್ಲಪ್ಪ, ಭಾಗೀರಥಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!