BlogHighlightsLocal newsOthersPoliticsState newsTrending

ಓಟಿಗಾಗಿ ಬಿಟ್ಟಿ ಭಾಗ್ಯ ನೀಡುತ್ತಿರುವ ರಾಜ್ಯ ಸರ್ಕಾರ ಜನರನ್ನು ವಂಚಿಸುತ್ತಿದೆ – ನಟಿ ಶೃತಿ ಹೇಳಿಕೆ

Aware others:

ಬೈಂದೂರು: ಕೇವಲ ವೋಟು ಮತ್ತು ಅಧಿಕಾರದ ಆಸೆಗಾಗಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನರನ್ನು ವಂಚಿಸುತ್ತಿದೆ ಎಂದು ನಟಿ, ಬಿಜೆಪಿ ನಾಯಕಿ ಶೃತಿ ಆರೋಪಿಸಿದ್ದಾರೆ. 

ಅವರು ಬೈಂದೂರಿನ ಕಿರಿಮಂಜೇಶ್ವರದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಉಚಿತ ಪ್ರಯಾಣ ಭಾಗ್ಯದಿಂದ ಮಹಿಳೆಯರು ಸೀಟಿಗಾಗಿ ನಡುಬೀದಿಯಲ್ಲಿ ಹೊಡೆದಾಡುತ್ತಿದ್ದಾರೆ. ಇಂತಹಾ ಪರಿಸ್ಥಿತಿ ಹಿಂದೆಂದೂ ಕಂಡಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಉಚಿತಗಳ ಮೂಲಕ ಕುಟುಂಬ ಕಲಹಗಳಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದರು.

ಬುಡಕಟ್ಟು ಸಮುದಾಯದಿಂದ ಬಂದಂತಹ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡಿದ ಹೆಮ್ಮೆ ಬಿಜೆಪಿಯದ್ದು, ಇಂತಹ ಮಹಿಳೆಯ ಬಗ್ಗೆ ಹಾಗೂ ನಮ್ಮ ಪ್ರಧಾನ ಮಂತ್ರಿ ಮೋದಿಯ ಬಗ್ಗೆ ಸಿದ್ದರಾಮಯ್ಯನವರು ಹಗುರವಾಗಿ ಮಾತನಾಡುತ್ತಾರೆ. ಅದೇ ರೀತಿ ಅವರ ಪಕ್ಷದ ಸೋನಿಯಾ ಗಾಂಧಿ ಬಗ್ಗೆ ಹಾಗೂ ರಾಹುಲ್ ಗಾಂಧಿ ಬಗ್ಗೆ ಮಾತನಾಡುತ್ತಾರೆಯೇ? ದೇಶದ ಹಿತಕ್ಕಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ ಎಂದರು.


Aware others:

Leave a Reply

Your email address will not be published. Required fields are marked *

error: Content is protected !!