BlogHighlightsLocal newsOthersPoliticsState newsTop StoriesTrendingWorld

ಎಪ್ರಿಲ್ 24ರ ಯೋಗಿ ಆದಿತ್ಯನಾಥ್ ಕಾರ್ಯಕ್ರಮ ರದ್ದು!?

Aware others:

ಉಡುಪಿ/ ಮಡಿಕೇರಿ: ಕೊಡಗು ಮತ್ತು ಉಡುಪಿ ಜಿಲ್ಲೆಗೆ ಏ.24ರಂದು ಆಗಮಿಸಬೇಕಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾರ್ಯಕ್ರಮ ರದ್ದುಗೊಂಡಿದೆ.

ಬಿಜೆಪಿಯ ಫಯರ್ ಬ್ರಾಂಡ್ ಪ್ರಚಾರಕರೆಂದೇ ಗುರುತಿಸಿಕೊಂಡಿರುವ ಯೋಗಿ ಆದಿತ್ಯನಾಥ್ ಅವರು ಏ.24ರಂದು ಮಡಿಕೇರಿಯಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಮತ್ತು ಉಡುಪಿಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಚುನಾವಣಾ ಪ್ರಚಾರ ನಡೆಸಬೇಕಿತ್ತು. ಮಲ್ಪೆ ಸೀ ವಾಕ್ ಬಳಿ ಸಮಾವೇಶಕ್ಕೆ ಜಿಲ್ಲಾ ಬಿಜೆಪಿ ಹಾಗೂ ಉಡುಪಿ ಶಾಸಕ ಯಶ್ಚಾಲ್ ಸುವರ್ಣ ಅವರ ನೇತೃತ್ವದಲ್ಲಿ ಸಕಲ ಸಿದ್ಧತೆ ನಡೆಸಲಾಗಿತ್ತು. ಯಾವ ಭಾಗದಲ್ಲಿ ವೇದಿಕೆ ಹಾಕಬೇಕು, ಎಷ್ಟು ಜನರಿಗೆ ಸೀಮಿತಗೊಳಿಸಬೇಕು. ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಬಸ್ಸು ಲಘು ಉಪಾಹಾರದ ವ್ಯವಸ್ಥೆಗಳ ಬಗ್ಗೆ ಯೋಜನೆಗಳನ್ನು ರೂಪಿಸಲಾಗಿತ್ತು. ಮಡಿಕೇರಿಯಲ್ಲಿಯೂ ಅನಿವಾರ್ಯ ಕಾರಣಗಳಿಂದಾಗಿ ಅವರ ಕಾರ್ಯಕ್ರಮ ರದ್ದಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!