BlogLocal newsNational NewsPoliticsState newsTrending

ಎಪ್ರಿಲ್ 27:  ಕಿರಿಮಂಜೇಶ್ವರದಲ್ಲಿ  ತೇಜಸ್ವಿ ಸೂರ್ಯ ಅಧ್ಯಕ್ಷತೆಯಲ್ಲಿ ಬಿಜೆಪಿ ಯುವ ಸಮಾವೇಶ

Aware others:

ತೇಜಸ್ವಿ ಸೂರ್ಯ

ಬೈಂದೂರು: ಬೈಂದೂರು ಮಂಡಲ ಯುವಮೋರ್ಚಾ ಸಮಾವೇಶವು ಏಪ್ರಿಲ್ 27ರ ಮಧ್ಯಾಹ್ನ 2 ಗಂಟೆಗೆ ಕಿರಿಮಂಜೇಶ್ವರದಲ್ಲಿ ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಯುವಮೋರ್ಚಾ ಕಾರ್ಯಕರ್ತರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಬೈಂದೂರು ಮಂಡಲ ಪ್ರಕಟಣೆ ತಿಳಿಸಿದೆ.

ತೇಜಸ್ವಿ ಸೂರ್ಯ

ಯುವಮೋರ್ಚಾ ಸಮಾವೇಶವನ್ನು  ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಉದ್ಘಾಟಿಸಿ, ಮುಖ್ಯ ಭಾಷಣ ಮಾಡಲಿದ್ದಾರೆ. ಚುನಾವಣೆಯಲ್ಲಿ ಯುವ ಮೋರ್ಚಾದ ಕಾರ್ಯ, ಯುವ ಜನತೆಯ ಉತ್ಸಾಹ, ದೇಶದಲ್ಲಿ ಕಳೆದ 10 ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯವನ್ನು ವಿವರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬೂತ್ ಕಡೆಗೆ ಸಮೃದ್ಧ ನಡಿಗೆ ಸಮಾರೋಪ

ಶಾಸಕ ಗುರುರಾಜ್ ಗಂಟಿಹೊಳೆ

ಯುವ ಮೋರ್ಚಾ ಸಮಾರೋಪ ಕಾರ್ಯಕ್ರಮದ ಬಳಿಕ ಅದೇ ವೇದಿಕೆಯಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ರೂಪಿಸಿ, ಅನುಷ್ಠಾನಗೊಳಿಸಿದ ಬೂತ್ ಕಡೆಗೆ ಸಮೃದ್ಧ ನಡಿಗೆಯ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಈ ಕಾರ್ಯಕ್ರಮದ ಪ್ರಮುಖ ಭಾಷಣ ಮಾಡಲಿದ್ದು, ಶಾಸಕ ಗುರುರಾಜ ಗಂಟಿಹೊಳೆ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Aware others:

Leave a Reply

Your email address will not be published. Required fields are marked *

error: Content is protected !!