BlogCrime newsNational NewsState newsTrendingWomen CareWorld

ಸೋಮವಾರಪೇಟೆ: ಅಪ್ರಾಪ್ತ ಬಾಲಕಿಯ ನಿಶ್ಚಿತಾರ್ಥ ತಡೆದಿದ್ದಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಲೆ!?

Aware others:

ಸೋಮವಾರಪೇಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿನ್ನೆಯಷ್ಟೇ ಪಾಸಾಗಿದ್ದ ಖುಷಿಯಲ್ಲಿದ್ದ ಆಕೆಯ ವಿವಾಹ ನಿಶ್ಚಿತಾರ್ತಯ ತಡೆದದ್ದನ್ನೇ ದೊಡ್ಡದು ಮಾಡಿದ್ದ ನಿಶ್ಚಿತಾರ್ಥ ಮಾಡಿಕೊಳ್ಳಬೇಕಿದ್ದ ಯುವಕ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿ ಪರಾರಿಯಾದ ಘಟನೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ  ಎಂಬಲ್ಲಿ ಗುರುವಾರ ನಡೆದಿದೆ. ಇಲ್ಲಿನ ನಿವಾಸಿ ಯು.ಎಸ್. ಮೀನಾ ಎಂಬ ಬಾಲಕಿಯೇ ಕೊಲೆಯಾದವಳು. ಅದೇ ಊರಿನ ಓಂಜಾರಪ್ಪ(32) ಕೊಲೆಗಡುಕ. ಶಿಕ್ಷಣದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಬಾಲಕಿ ವಿನಾ ಕಾರಣ ಕೊಲೆಯಾಗಿ ಜೀವನ ಪಯಣವನ್ನೇ ಮುಗಿಸಿದ್ದಾಳೆ.

ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು ನಿನ್ನೆ ಗುರುವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ಎಸ್‌ಎಸ್ ಎಲ್‌ಸಿ ಪರೀಕ್ಷೆಯಲ್ಲಿ ಪಾಸಾದ ಖುಷಿಯಲ್ಲಿ ಮೀನಾ ಮತ್ತು ಆಕೆಯ ಪೋಷಕರು ಇದ್ದರು. ಆದರೆ ಈ ಖುಷಿ ಹೆಚ್ಚು ಹೊತ್ತು ಇರಲಿಲ್ಲ.

ನಿನ್ನೆ ಸಾಯಂಕಾಲ ತನ್ನ ಮನೆಯ ಮುಂದೆಯೇ ದಾರುಣವಾಗಿ ಹತ್ಯೆಗೀಡಾಗಿದ್ದಾಳೆ. ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ಆಕೆಯ ಮನೆಗೆ ಬಂದು ಪೋಷಕರ ಎದುರೇ ಎಳೆದುಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ವಿಕೃತಿ ಮೆರೆದು ಪರಾರಿಯಾಗಿದ್ದಾನೆ.

ಕೊಲೆ ನಡೆದಿದ್ದೇಕೆ?: ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ನಡೆಯಬೇಕಾಗಿತ್ತಂತೆ. ಈ ವಿಚಾರ ತಿಳಿದ ಗ್ರಾಮಸ್ಥರು ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ 18 ವರ್ಷ ತುಂಬಿದ ಮೇಲಷ್ಟೇ ಮದುವೆ ಮಾಡಲು ಸಾಧ್ಯ ಎಂದು ಬುದ್ದಿವಾದ ಹೇಳಿ ಹೋಗಿದ್ದರು. ಪೊಲೀಸರು ಕೂಡ ನಿಶ್ಚಿತಾರ್ಥ ನಿಲ್ಲಿಸಿದ್ದರು. ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಆದರೆ ಆರೋಪಿ ಸಿಟ್ಟಿನಲ್ಲಿ ಮೀನಾಳನ್ನು ಕೊಲೆಗೈದಿದ್ದಾನೆ ಎಂದು ಹೇಳಲಾಗುತ್ತಿದೆ.

ಶ್ವಾನದಳ, ವಿಧಿ ವಿಜ್ಞಾನ ತಂಡ ಭೇಟಿ: ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮಚ್ಚು ಪತ್ತೆಯಾಗಿದ್ದು, ಪೊಲೀಸರು ಆರೋಪಿಗಾಗಿ  ಶೋಧಕಾರ್ಯ ನಡೆಸುತ್ತಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!