BlogCrime newsHighlightsLocal newsNational NewsOthersState newsTrending

ಪುತ್ತೂರು: ಕುತ್ತಿಗೆಗೆ ನಾಯಿ ಸಂಕೋಲೆ ಬಿಗಿದು ಯುವಕನ ಕೊಲೆ ಶಂಕೆ – ತಾಯಿ ಸೇರಿದಂತೆ ಮೂವರು ಪೊಲೀಸ್‌ ವಶಕ್ಕೆ

Aware others:

ಪುತ್ತೂರು: ತಾಲೂಕಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಕುಡಿತದ ಚಟ ಹೊಂದಿದ್ದನೆನ್ನಲಾದ ಯುವಕನ ಕುತ್ತಿಗೆಗೆ ಸಂಕೋಲೆ ಬಿಗಿದು ಕೊಲೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಯುವಕನ ತಾಯಿ ಹಾಗೂ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇಲ್ಲಿನ ಚೇತನ್ (33) ಮೃತಪಟ್ಟ ಯುವಕ. ಚೇತನ್ ನೇಣು ಬಿಗಿದು ಮೃತಪಟ್ಟಿರುವ ಬಗ್ಗೆ ಆತನ ತಾಯಿ ಪೋಲೀಸ್ ದೂರು ದಾಖಲಿಸಿದ್ದರು. ಚೇತನ್ ಗುರುವಾರ ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಬಳಿಕ ತಾಯಿಯೊಂದಿಗೆ ಜಗಳವಾಡಿ ಮನೆಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದಾನೆ. ಇದನ್ನು ಯೂಸುಫ್ ಅವರು ಚೇತನ್ ತಾಯಿಗೆ ಕರೆ ಮಾಡಿ ತಿಳಿಸಿದ್ದರು. ಅಲ್ಲಿಗೆ ಬಂದ ಚೇತನ್ ತಾಯಿ ಉಮಾವತಿಯವರು ನಾಯಿಯನ್ನು ಕಟ್ಟುವ ಸಂಕೊಲೆಯನ್ನು ಚೇತನ್ ಸೊಂಟಕ್ಕೆ ಹಾಕಿ ಮನೆಗೆ ಎಳೆದೊಯ್ದಿದ್ದರು. ಈ ವೇಳೆ ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಚೇತನ್‌ನನ್ನು ಮನೆಗೆ ಎಳೆದೊಯ್ದಿದ್ದರು ಎನ್ನಲಾಗಿದೆ.

ಸಂಕೋಲೆ ಎಳೆಯುವ ಸಮಯದಲ್ಲಿ ಚೇತನ್ ಕುತ್ತಿಗೆಗೆ ಸಂಕೋಲೆ ಸುತ್ತಿಕೊಂಡಿದೆ. ಕುತ್ತಿಗೆಯ ಸಂಕೋಲೆ ಬಿಗಿದು ಚೇತನ್ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಘಟನೆಗೆ ಸಂಬಂಧಿಸಿದಂತೆ ತಾಯಿ ಉಮಾವತಿ ಸೇರಿದಂತೆ ಮೂವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಶವಪರೀಕ್ಷೆಯಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೋಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!