BlogHighlightsLifestyleLocal newsNational NewsOthersState newsTop StoriesTrending

ಗುಂಡ್ಮಿ ಟೋಲ್ ಗೇಟ್ ನಲ್ಲಿ ಸ್ಥಳೀಯರಿಗೆ ಶುಲ್ಕ ವಸೂಲಿ ವಿರೋಧಿಸಿ ಪ್ರತಿಭಟನೆ

Aware others:

ಕುಂದಾಪುರ: ಸ್ಥಳೀಯರಿಗೆ ವಿನಾಯತಿ ನೀಡಲಾದ ಶುಲ್ಕವನ್ನು ಮತ್ತೆ ಪಡೆಯಲಾಗುತ್ತಿದೆ ಎಂದು ಆರೋಪಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಂಡ್ಮಿ ಟೋಲ್ ಗೇಟ್ ನಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ವಕೀಲ ಶ್ಯಾಮ್ ಸುಂದರ್ ಬಾಯರಿ ಮಾಧ್ಯಮಗಳ ಜೊತೆ ಮಾತನಾಡಿ, ಈ ಹಿಂದೆ ನವಯುಗ ಕಂಪನಿಯಲ್ಲಿ ಸ್ಥಳೀಯ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಾಹನ ಚಾಲಕರಿಗೆ ವಿನಾಯಿತಿ ನೀಡಲಾಗಿತ್ತು. ಆದರೆ ಇದೀಗ ಹೈವೇ ಕನ್ ಸ್ಟ್ರಕ್ಷನ್ ಎಂಬ ಸಂಸ್ಥೆಯು ಗುಂಡ್ಮಿ ಟೋಲನ್ನು ಗುತ್ತಿಗೆ ಪಡೆದಿದ್ದು ಸ್ಥಳೀಯರಿಗೆ ಶುಲ್ಕ ವಿನಾಯತಿಗೆ ನಿರಾಕರಿಸಿರುವುದು ಆಕ್ಷೇಪಾರ್ಹ. ಶುಲ್ಕ ವಿನಾಯತಿ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.

ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಬರುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಆದರೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಟೋಲ್ ಗೇಟಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಟೋಲ್ ಗೇಟ್ ನಲ್ಲಿ ವಾಹನ ಸಂಚಾರ ಅಸ್ತವ್ಯಸದಥಗೊಂಡಿತು. ದಿಕ್ಕು ಕಾಣದಾದ ಟೋಲ್ ಗೇಟ್ ಸಿಬ್ಬಂದಿಗಳು ವಾಹನಗಳಿಗೆ ಸುಂಕ ಪಡೆಯದೇ ಸಂಚರಿಸಲು ಅವಕಾಶ ನೀಡಿದರು.

ಈ ಸಂದರ್ಭ ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ನಿಯಂತ್ರಣಕ್ಕೆ ಯತ್ನಿಸಿದರು. ಬಳಿಕ ಪ್ರತಿಭಟನಾಕಾರರ ಜೊತೆ ಮಾತನಾಡಿದ ಅವರು, ಸೋಮವಾರ ಸಂಜೆ 5:00 ಗಂಟೆಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲು ಅವಕಾಶ ನೀಡುವ ಭರವಸೆ ನೀಡಿರು. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ. ಸೋಮವಾರ ಸಂಜೆಯ ಮಾತುಕತೆ, ಫಲಪ್ರದವಾಗದೆ ಇದ್ದಲ್ಲಿ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಸ್ಥಳೀಯ ನಾಯಕರದ ರಾಜಶೇಖರ್ ಹೆಬ್ಬಾರ್, ಅಲ್ವಿನ್ ಅಂದ್ರಾದೆ, ವಿಠ್ಠಲ್ ಪೂಜಾರಿ ಸೇರಿದಂತೆ ನೂರಾರು ಸ್ಥಳೀಯ ಹೋರಾಟಗಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ 👇


Aware others:

Leave a Reply

Your email address will not be published. Required fields are marked *

error: Content is protected !!