ಉಡುಪಿ: ಗುರುವಾರದ ಸಿಡಿಲಿಗೆ ಯುವಕ ಬಲಿ

ಉಡುಪಿ: ಗುರುವಾರ ರಾತ್ರಿಯ ಭಾರೀ ಸಿಡಿಲಿಗೆ ಕಾಪು ತಾಲೂಕು ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಎಂಬಲ್ಲಿ ಯುವಕನೊಬ್ಬ ಬಲಿಯಾಗಿದ್ದಾನೆ. ಇಲ್ಲಿನ ರಕ್ಷಿತ್ ಪೂಜಾರಿ ಎಂದು ಗುರುತಿಸಲಾಗಿದೆ. ರಕ್ಷಿತ್ ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ.
ರಾತ್ರಿ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲಾಘಾತವಾಗಿದೆ. ಕೂಡಲೇ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ರಕ್ಷಿತ್ ಮೃತಪಟ್ಟಿದ್ದಾನೆ
