ಬೈಂದೂರು: ದುರಸ್ತಿ ವೇಳೆ ವಿದ್ಯುತ್ ಶಾಕ್ – ಲೈನ್ಮ್ಯಾನ್ ಸಾವು

ಕುಂದಾಪುರ: ಟ್ರಾನ್ಸಾರ್ಮರ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್ಮ್ಯಾನ್ ಒಬ್ಬ ಮೃತಪಟ್ಟ ಘಟನೆ ಸೋಮವಾರ ತಗ್ಗರ್ಸೆ ಎಂಬಲ್ಲಿ ನಡೆದಿದೆ. ಲೈನ್ಮ್ಯಾನ್ ಸಲೀಂ ಮೇ. ಅಗಸಿಮನೆ (38) ಎಂಬಾತನೇ ಸಾವನ್ನಪ್ಪಿದವರು.
ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಸೋಮವಾರ ಮಧ್ಯಾಹ್ನದ ವೇಳೆ ಟ್ರಾನ್ಸ್ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಲೈನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಲೀಂ ಅವರು ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿ. ವಿವಾಹಿತರಾಗಿರುವ ಅವರು ಪತ್ನಿ ಹಾಗೂ ಎರಡು ತಿಂಗಳ ಮಗುವನ್ನು ಅಗಲಿದ್ದಾರೆ.