ಬೈಂದೂರು: ಜೂನ್ 29ರಂದು ಶೆಫ್ ಟಾಕ್ ನ್ಯೂಟ್ರೀಫುಡ್ಸ್ ಸಂಸ್ಥೆ ಲೋಕಾರ್ಪಣೆ

ಬೈಂದೂರು: ಜೂನ್ 29ರಂದು ಖ್ಯಾತ ಉದ್ಯಮಿ ಗೋವಿಂದ ಬಾಬು ಪುಜಾರಿ ಅವರ ಕನಸಿನ ಕೂಸು ಶೆಫ್ ಟಾಕ್ ನ್ಯೂಟ್ರೀ ಫುಡ್ಸ್ ಫ್ರೈವೇಟ್ ಲಿಮಿಟೆಡ್ ಎನ್ನುವ ನೂತನ ಸಂಸ್ಥೆ ಲೋಕಾರ್ಪಣೆಗೊಳ್ಳಲಿದೆ. ಬೈಂದೂರಿನ ಹೇರಾಂಜಾಲು ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಈ ಸಂಸ್ಥೆಯು ಶನಿವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಚಿಕ್ಕಿ, ಚಕ್ಕುಲಿ ಮೊದಲಾದ ಸವಿರುಚಿ ಖಾದ್ಯಗಳನ್ನು ತಯಾರಿಸುವ ಶೆಫ್ ಟಾಕ್ ನ್ಯೂಟ್ರೀ ಫುಡ್ಸ್ ಫ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮೂಲಕ ಸ್ಥಳೀಯ ನಿರುದ್ಯೋಗಿಗಳಿಗೆ ಕೆಲಸ ನೀಡುವ ಸದುದ್ಧೇಶದ ಜೊತೆಗೆ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸಿಹಿ ತಿನಿಸುಗಳನ್ನು ಸಂಸ್ಥೆ ಒದಗಿಸಲಿದೆ.
ಅವಧೂತ ಶ್ರೀ ವಿನಯ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಎ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜೀ ಶಾಸಕರುಗಳಾದ ಕೆ. ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ ಶೆಟ್ಟಿ, ಕಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ ದೇವಾಡಿಗ, ಮರವಂತೆ ಬಡಾಕೆರೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಪೂಜಾರಿ, ಮಾಜೀ ತಾಲೂಕು ಪಂಚಾಯತ್ ಸದಸ್ಯ ಹೆಚ್. ವಿಜಯ ಶೆಟ್ಟಿ ಮೊದಲಾದವರ ಘನ ುಪಸ್ಥಿತಿ ಇರಲಿದೆ ಎಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಗೋವಿಂದ ಬಾಬು ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.