ಕುಂದಾಫುರ: ಶ್ರೀ ವೆಂಕಟರಮಣ ಶಾಲೆಯಲ್ಲಿ ಆರೋಗ್ಯ ವಿಚಾರಗೋಷ್ಟಿ,
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಇವರ ಸಹಯೋಗದೊಂದಿಗೆ “ಆತ್ಮಹತ್ಯೆ, ಮಾದಕ ವ್ಯಸನ, ತಿನ್ನುವ ಸಮಸ್ಯೆಗಳನ್ನು ತಡೆಗಟ್ಟುವುದು” ಎಂಬ ವಿಷಯದ ಮೇಲೆ ಒಂದು ದಿನದ ವಿಚಾರಗೋಷ್ಟ ಕಾರ್ಯಾಗಾರ ನಡೆಯಿತು.

ನರ್ಸಿಂಗ್ ವಿಭಾಗ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್, ಮಾಹೆ ಇದರ ಮನೋವೈದ್ಯಕೀಯ ಮಾನಸಿಕ ಆರೋಗ್ಯ ವಿಭಾಗದ ಹಿರಿಯ ದರ್ಜೆ ಸಹಾಯಕ ಪ್ರಾಧ್ಯಾಪಕ ರೆಂಜುಲಾಲ್ ಯಶೋಧರನ್ ನೇತೃತ್ವದಲ್ಲಿ ಕಾರ್ಯಾಗಾರ ನಡೆಯಿತು. ಶಾಲೆಯ ಶಿಕ್ಷಕ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು.
