BlogAccidentCrime newsHighlightsHuman storiesLifestyleLocal newsObituaryOthersTop StoriesTrendingWomen Care

ಕುಂದಾಪುರ: ಗಂಡ ಹೆಂಡಿರ ಜಗಳ ಠಾಣೆಯಲ್ಲಿ ಇತ್ಯರ್ಥ – ವಾಪಾಸ್ಸು ಬರುತ್ತಿದ್ದಾಗ ಪತಿ ಹೊಳೆಗೆ ಹಾರಿ ನಾಪತ್ತೆ!

Aware others:

ಕುಂದಾಪುರ: ಗಂಡ ಹೆಂಡತಿ ಪರಸ್ಪರ ಜಗವಾಳಿಕೊಂಡ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾಳಾವರ ಗ್ರಾಮದ ಅಂಗನವಾಡಿ ಸಮೀಪವಾಸಿ ಹರೀಶ್ ಬೋವಿ(40) ಎಂದು ಗುರುತಿಸಲಾಗಿದೆ.

ಹರೀಶ್ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದ ಅವರು, ಇತ್ತೀಚೆಗೆ ಗಂಭೀರವಾಗಿದ್ದರು ಎನ್ನಲಾಗಿದೆ. ಆಗಾಗ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದರೆನ್ನಲಾಗಿದೆ. ಮಂಗಳವಾರ ಬೆಳಿಗ್ಗೆ ಜಗಳ ತಾರಕ್ಕೇರಿ ಮಕ್ಜಳನ್ನು ಬಾವಿಗೆ ದೂಡಲೆತ್ನಿಸದ್ದರು ಎನ್ನಲಾಗಿದೆ. ಇದರಿಂದ ಆತಂಕಗೊಂಡಿದ್ದ ಅವರ ಪತ್ನಿ ಕಂಡ್ಲೂರು ಠಾಣೆಗೆ ದೂರು ನೀಡಿದ್ದರು. 

ಪೊಲೀಸರು ಗಂಡ ಹೆಂಡತಿಯನ್ನು ಠಾಣೆಗೆ ಕರೆಯಿಸಿ ಪಂಚಾಯಿತಿ ಮಾಡಿ ಆಟೋದಲ್ಲಿ ಕಳಿಸಿದ್ದರು. ಠಾಣೆಯಿಂದ ಬರುತ್ತಿದ್ದ ವೇಳೆ ಕಂಡ್ಲೂರು ಸೇತುವೆ ಸಮೀಪ ಆಟೋ ಚಾಲಕನಿಗೆ ರಿಕ್ಷಾ ನಿಧಾನಿಸುವಂತೆ ತಿಳಿಸಿದ ಹರೀಶ್ ವಾರಾಹಿ ಹೊಳೆಗೆ ಸೇತುವೆಯಿಂದ ಹಾರಿದ್ದಾರೆ.

ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕಾಗಮಿಸಿದ  ಸ್ಥಳೀಯರು, ಪೊಲೀಸರು, ಅಗ್ನಿಶಾಮಕದಳ, ಮುಳುಗುತಜ್ಞರು ಹರೀಶ್ ಪತ್ತೆಗೆ ಶೋಧಕಾರ್ಯದಲ್ಲಿ ತೊಡಗಿದರು. ಆದರೆ ವಿಪರೀತ ಮಳೆ, ಉಕ್ಕಿ ಹರಿಯುತ್ತಿರುವ ನದಿ ನೀರಿನಲ್ಲಿ ಪತ್ತೆ ಕಾರ್ಯ ಸಫಲವಾಗಿಲ್ಲ. ಹರೀಶ್ ಗೆ ಇಬ್ಬರು ಹೆಣ್ಣುಮಕ್ಕಳಿದ್ದು ಹಿರಿಮಗಳು ಮೂರನೇ ತರಗತಿ ಹಾಗೂ ಕಿರಿಯವಳು ಅಂಗನವಾಡಿಗೆ ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಂಡ್ಲೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು ಶೋಧ ಕಾರ್ಯ ಮುಂದುವರೆದಿದೆ.


Aware others:

Leave a Reply

Your email address will not be published. Required fields are marked *

error: Content is protected !!