ಕುಂದಾಪುರ: ನಾಳೆ ಮಂಜುನಾಥ ಭಂಡಾರಿ ಕ್ಷೇತ್ರ ಭೇಟಿ – ಹಾನಿಗೊಳಗಾದ ಸ್ಥಳಗಳ ವೀಕ್ಷಣೆ
ಕುಂದಾಪುರ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಮಂಜುನಾಥ ಭಂಡಾರಿ ಜುಲೈ 31ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಿಂದ ಇಂಡಿಗೋ ವಿಮಾನದ ಮೂಲಕ ಮಂಗಳೂರಿಗೆ ಬರಲಿದ್ದಾರೆ. ಬೆಳಿಗ್ಗೆ 8.30ಕ್ಕೆ ರಸ್ತೆ ಮೂಲಕ ಹೊರಟು 10.30ಕ್ಕೆ ಬೈಂದೂರು ಅತಿವೃಷ್ಟಿಯಿಂದ ಹಾನಿಗೊಳಗಾದ ಸೋಮೇಶ್ವರ ಹಾಗೂ ಒತ್ತಿನಣೆ ಗುಡ್ಡ ಕುಸಿತದ ಪ್ರದೇಶಗಳ ವೀಕ್ಷಿಸುತ್ತಾರೆ. 11.30ಕ್ಕೆ ಬೈಂದೂರು ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ನಾವುಂದ, ಸಾಲ್ದುಂಡ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ, 12.30ಕ್ಕೆಕುಂದಾಪುರದ ಹೊಟೇಲ್ ಶೆರೋನ್ ನಲ್ಲಿ ಪತ್ರಿಕಾಗೋಷ್ಟಿ ನಡೆಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಕುಂದಾಪುರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ವಂಡ್ಸೆ, ಕುಳಂಜೆ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ, 2.30ಕ್ಕೆ ಕುಂದಾಪುರ ತಾಲ್ಲೂಕಿನ ಅತಿವೃಷ್ಟಿಯಿಂದ ಹಾನಿಗೊಳಗಾದ ರಟ್ಟಾಡಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ, 3.30ಕ್ಕೆ ಬ್ರಹ್ಮಾವರ ತಾಲ್ಲೂಕಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಮಣೂರು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ, 4 ಗಂಟೆಗೆ ಬ್ರಹ್ಮಾವರ ತಾಲ್ಲೂಕಿನ ಕೆಮ್ಮಣ್ಣು ಹುಜಾರುಬೆಟ್ಟು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ, ಸಂಜೆ 4.30ಕ್ಕೆ ಕಾಪು ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ನಡಿಪಟ್ನಾ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.