ನಾಗೂರು: ಕೊಡೇರಿ ಉಡುಪರ ಮನೆ ಬಾವಿಯಲ್ಲಿ ಮೊಸಳೆ ಪ್ರತ್ಯಕ್ಷ
ಕುಂದಾಪುರ: ನಾಗೂರು ಸಮೀಪದ ಕೊಡೇರಿ ವಡೇರ ಮಠ ವಿಶ್ವನಾಥ ಉಡುಪರ ಮನೆಯ ಕುಡಿಯುವ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಮಂಗಳವಾರ ಮಧ್ಯಾಹ್ನ ಮನೆಯವರು ಬಾವಿಯಲ್ಲಿರುವುದನ್ನು ನೋಡಿದ್ದಾರೆ.






ದಾರಿ ತಪ್ಪಿ ಬಂದ ಮೊಸಳೆ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಕ ಆವರಣಗೋಡೆ ತಗ್ಗಿನಲ್ಲಿರುವುದರಿಮದ ಮತ್ತು ಬಾವಿಯಲ್ಲಿ ನೀರು ತುಂಬಿರುವುದರಿಂದ ಆಕಸ್ಮಿಕವಾಗಿ ಮೊಸಳೆ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಬೃಹತ್ ಮೊಸಳೆಯನ್ನು ವೀಕ್ಸಿಲು ಧಾವಿಸಿದ್ದಾರೆ. ಅರಣ್ಯಾಧಿಕಾರಿಗಳು, ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ಮೊಸಳೆಯನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಪಶುವೈದ್ಯರೂ ಸ್ಥಳಕ್ಕಾಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
