BlogAccidentCrime newsHealthHighlightsHuman storiesLocal newsObituaryOthersTop StoriesTrending

ಕುಂದಾಪುರ: ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Aware others:

ಕುಂದಾಪುರ : ನಗರದ ಬಾಡಿಗೆ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ನಾಗರಾಜ ಎಂಬವರಿಗೆ ಸೇರಿದ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಆಚಾರ್ಯ(45)ರ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಂಗಳವಾರ ಬೆಳಿಗ್ಗೆ ಸಂತೋಷ್ ಅಚಾರ್ಯ ತನ್ನ ಸ್ನೇಹಿತನಿಗೆ ಗುಡ್ ಮಾರ್ನಿಂಗ್ ಸಂದೇಶ ಕಳುಹಿಸಿದ್ದರೆನ್ನಲಾಗಿದ್ದು, ಮಂಗಳವಾರ ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸಂತೋಷ ಆಚಾರ್ಯ ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಪ್ಪೂರಿನಲ್ಲಿರುವ ತನ್ನ ಮನಗೆ ಹೋಗಿ ಬರುತ್ತಿದ್ದರು ಎಂದು ತಿಳಿದು ಬಂದಿದೆ. ಇಂದು ನಾಗರ ಪಂಚಮಿ ಹಬ್ಬಕ್ಕೆ ಅಣ್ಣ ಮನೆಗೆ ಬರಲಿಲ್ಲವೆಂದು ಸಹೋದರ ಸುರೇಶ್ ಆಚಾರ್ಯ ಸಂತೋಷ್ ಗೆ ಫೋನ್ ಮಾಡಿದ್ದು ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಅವರು ಅಣ್ಣನ ಮನೆಗೆ ಸ್ನೇಹಿತರೊಬ್ಬರನ್ನು ಕಳುಹಿಸಿ ವಿಚಾರಿಸಿದಾಗ ಮನೆಯ ಒಳಗಿನಿಂದ ದುರ್ವಾಸನೆ ಬರುತ್ತಿತ್ತೆನ್ನಲಾಗಿದೆ. ಬಳಿಕ ಮನೆಯ ಮಾಲೀಕರ ಗಮನಕ್ಕೆ ತಂದಿದ್ದು, ಸುದ್ಧಿ ತಿಳಿದ ಸ್ಥಳೀಯರು ಬಾಗಿಲು ಒಡೆದು ನೋಡಿದಾಗ ಸಂತೋಷ್ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂತೋಷ್ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿದ್ದರು. ಮನೆಯ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಲಾಗಿತ್ತು. ಫ್ಯಾನ್ ತಿರುಗುತ್ತಿತ್ತು. ಮೊಬೈಲ್ ಇಯರ್ ಫೋನ್ ಕಿವಿಗೆ ಸಿಕ್ಕಿಸಿದ್ದು ಹಾಗೆಯೇ ಇತ್ತು.  ಶವವನ್ನು ಸರಕಾರಿ ಆಸ್ಪತ್ರೆಯ ಶವಾಗರಕ್ಕೆ ಸಾಗಿಸಲಾಗಿದ್ದು ಬಳಿಕ ಮರಣೋತ್ತರ ಶವ ಪರೀಕ್ಷೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೃತ ಸಂತೋಷ್ ತಾಯಿ, ಇಬ್ಬರು ಸಹೋದರರು ಹಾಗೂ ಒಬ್ಬ ಸಹೋದರಿಯನ್ನು ಅಗಲಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!