ಸಾಸ್ತಾನ: ಕಪ್ಪೆ ಚಿಪ್ಪು ತೆಗೆಯಲು ಹೋಗಿ ಹೊಳೆ ನೀರಿಗೆ ಬಿದ್ದು ಸಾವು
ಕೋಟ: ಕಪ್ಪೆ ಚಿಪ್ಪು ತೆಗೆಯಲು ಹೊಳೆಗೆ ಹೋದ ವ್ಯಕ್ತಿಯೊಬ್ಬ ಕಾಲು ಜಾರಿ ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ. ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ಮೃತಪಟ್ಟವರು.



ರಾಜು ಮರಕಾಲ ಶುಕ್ರವಾರ ಸಂಜೆ ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲೆಂದು ಹೋಗಿದ್ದರು. ಆದರೆ ರಾತ್ರಿಯಾದರೂ ಆತ ಮನೆಗೆ ಬಾರದೇ ಕಾಣೆಯಾಗಿದ್ದರು. ಇಂದು ಬೆಳಿಗ್ಗೆ ಅವರ ಮೃತದೇಹ ಸಾಸ್ತಾನ ಕೋಡಿ ಹೊಳೆಯಲ್ಲಿ ತೇಲುತ್ತಿರುವುದನ್ನು ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ತಕ್ಷಣ ಸ್ಥಳೀಯರು ಕೋಟ ಪೊಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಘಮಿಸಿದ ಪೊಲಿಸರು ಕಾರ್ಯಾಚರಣೆ ನಡೆಸಿ ದೋಣಿ ಮೂಲಕ ಶವವನ್ನು ಮೇಲಕ್ಕೆತ್ತಿದ್ದಾರೆ. ಕೋಟ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.