ಕುಂದಾಪುರ: ಕುಸ್ತಿ ಸ್ಪರ್ಧೆಯಲ್ಲಿ ವೆಂಕಟರಮಣ ಶಾಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ರಜತಾದ್ರಿ ಉಡುಪಿ, ಹಾಗೂ ನಿವೇದಿತಾ ಪ್ರೌಢ ಶಾಲೆ ಜಂಟಿಯಾಗಿ ನಡೆಸಿದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ – ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಾದ ಪ್ರಣವ್ ಕೆ. ಶೇರೆಗಾರ್, ಹರ್ಷಿಣಿ, ಸೋನಿಕಾ ಆರ್, 10ನೇ ತರಗತಿಯ ವಿದ್ಯಾರ್ಥಿನಿಯರಾದ ಮಾನ್ಯ, ಅಕ್ಷತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.