BlogCulturalHighlightsLocal newsOthersPoliticsProtestState newsTechTop Stories

ಸಿದ್ಧಾಪುರ: ವಾರಾಹಿ ಬಲದಂಡೆ ಯೋಜನೆ ಅನುಷ್ಠಾನಿಸಿ ಇಲ್ಲವೇ ಪ್ರತಿಭಟನೆ ಎದುರಿಸಿ – ಅಧಿಕಾರಿಗಳಿಗೆ ಶಾಸಕ ಗಂಟಿಹೊಳೆ ಎಚ್ಚರಿಕೆ

Aware others:

ಕುಂದಾಪುರ: ವಾರಾಹಿ ಯೋಜನೆಯ ಬಲದಂಡೆಯ ಮೂಲಕ ಶೀಘ್ರವೇ ನೀರು ಹರಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಶಾಸಕನಾಗಿ ತೀವ್ರ ಸ್ವರೂಪದ ಹೋರಾಟಕ್ಕೆ ಸಿದ್ಧನಿದ್ದೇನೆ ಎಂದು ವಾರಾಹಿ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಚಾಟಿ ಬೀಸಿದ್ದಾರೆ. ಬುಧವಾರ ವಾರಾಹಿ ಕಚೇರಿಯಲ್ಲಿ ನಡೆದ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯಲ್ಲಿ ಅವರು ಮಾತನಾಡಿದರು.

ಬೈಂದೂರು ಕ್ಷೇತ್ರದ ಗ್ರಾಮಗಳಿಗೆ ವಾರಾಹಿ ನೀರುಣಿಸಲು ಇರುವ ಯೋಜನೆಗಳ ಬಗ್ಗೆ ಈವರೆಗೂ ಯಾವುದೇ ಸ್ಪಷ್ಟ ಯೋಜನೆ ಇಲ್ಲದೇ ಇರುವುದು ತಿಳಿದು ವ್ಯಘ್ರರಾದ ಗಂಟಿಹೊಳೆ, ಹೊಸದಾಗಿ ಯೋಜನೆಯನ್ನು ರೂಪಿಸಿ ಕಾರ್ಯಗತ ಮಾಡುವ ನಿಟ್ಟಿನಲ್ಲಿಯೂ ಅಧಿಕಾರಿಗಳು ಕ್ರಮ ವಹಿಸಬೇಕು ಎಂದೆಚ್ಚರಿಸಿದರು.

ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ 👇

https://youtu.be/ab34n-IZP20?si=o8RyYxkYFPfS6wsx

ಬೈಂದೂರು ಕ್ಷೇತ್ರಕ್ಕೆ ವಾರಾಹಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಸುದೀರ್ಘ ಹೋರಾಟ ರೂಪಿಸಲಾಗುತ್ತಿದೆ. ಈ ಯೋಜನೆಯಿಂದ ಬೈಂದೂರು ಕ್ಷೇತ್ರಕ್ಕೆ ಯಾವುದೇ ಅನುಕೂಲ ಆಗಿಲ್ಲ. ಇದಕ್ಕಾಗಿ ಹೋರಾಟ ಸಮಿತಿ ರಚನೆ ಮಾಡಲಾದೆ. ಈ ಸಮಿತಿ ಈಗಾಗಲೇ ಸಿದ್ದಾಪುರ ಭಾಗದಲ್ಲಿ ಒಂದು ಸಭೆಯನ್ನು ನಡೆಸಲಾಗಿದ್ದು, ಎಲ್ಲ ಗ್ರಾಮಗಳಲ್ಲೂ ಸಭೆ ನಡೆಸಲಿದೆ. ಸಮಿತಿಯ ನಿರ್ಧಾರದಂತೆ  ಮುಂದಿನ ಹೋರಾಟದ ರೂಪರೇಷೆಗಳನ್ನು ಸಿದ್ಧಪಡಿಸಲಿದ್ದೇವೆ. ಇಲ್ಲಿನ ರೈತರ ಅನುಕೂಲಕ್ಕಾಗಿ ಸುದೀರ್ಘ ಹೋರಾಟ ನಡೆಯಲಿದೆ ಎಂದು ಗಂಟಿಹೊಳೆ ಹೇಳಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!