AccidentBlogCrime newsHighlightsLifestyleLocal newsOthersTop StoriesTrending

ಬೈಂದೂರು:ಬೈಕ್ ಗಳ ಡಿಕ್ಕಿ – ನಿವೃತ್ತ ಶಿಕ್ಷಕ ಸಾವು

Aware others:

ಕುಂದಾಪುರ: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದು ಬೈಕಿನಲ್ಲಿ ಪ್ರಯಾಣಿಸಿಸುತ್ತಿದ್ದ ನಿವೃತ್ತ ಶೀಕ್ಷಕ ಸಾವನ್ನಪ್ಪಿದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಂದನವನ ರಾಷ್ಟ್ರಿಯ ಹೆದ್ದಾರಿ 66ರ ಡಿವೈಡರ ಬಳಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ನಿವೃತ್ತ ಶಿಕ್ಷಕ ರೋಹಿತಾಶ್ವ ಎಂದು ಗುರುತಿಸಲಾಗಿದೆ.

ರೋಹಿತಾಶ್ವ ತನ್ನ ಸ್ಕೂಟಿಯಲ್ಲಿ ಭಾನುವಾರ ಬೆಳಿಗ್ಗೆ ನಂದನವನ ರಸ್ತೆಯಿಂದ ರಾಷ್ಟ್ರಿಯ ಹೆದ್ದಾರಿ 66 ರ ಪಶ್ಚಿಮ ಬದಿಯ ರಸ್ತೆಯಿಂದ ಪೂರ್ವ ಬದಿಯ ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದರು. ಇದೇ ಸಂದರ್ಭ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ರಾಷ್ಟ್ರಿಯ ಹೆದ್ದಾರಿ 66 ರ ಪೂರ್ವ ಬದಿ ರಸ್ತೆಯಲ್ಲಿ ಚೇತನ್ ಎಂಬಾತ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಎರಡು ವಾಹನದ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದು ಈ ಪೈಕಿ ತಲೆಗೆ ಗಂಭೀರ ಸ್ವರೂಪದ ಗಾಯಗೊಂಡು ರೋಹಿತಾಶ್ವ ರವರು ಮಣಿಪಾಲ್ ಕೆಎಂಸಿ ಆಸ್ಪತ್ರೆ ಗೆ ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಆತ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಬೈಕ್ ಸವಾರ ಚೇತನ್ ಕೂಡಾ ಗಂಭೀರ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!