AccidentBlogCrime newsEducationHighlightsHuman storiesLifestyleLocal newsObituaryOthersState newsTop StoriesTrending

ಇಂಜಿನಿಯರ್ ಸೀಟ್ ಬೇಡ ಎಂದು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ವಿದ್ಯಾರ್ಥಿ!

Aware others:

ಕುಂದಾಪುರ: ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿದ್ದಕ್ಕೆ ಬೇಸರಗೊಂಡ ಅಪ್ರಾಪ್ತ ಪ್ರಾಯದ ವಿದ್ಯಾರ್ಥಿಯೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹಳ್ನಾಡು ಎಂಬಲ್ಲಿ ನಡೆದಿದೆ. 

ಹಳ್ನಾಡು ಗ್ರಾಮದ ಶಿವಪ್ರಸಾದ್ ಶೆಟ್ಟಿ ಎಂಬುವರ ಮಗ ಸುಪ್ರಜ್ ಶೆಟ್ಟಿ(17) ಆತ್ಮಹತ್ಯೆ ಮಾಡಿಕೊಂಡಾತ. ಕುಂದಾಪುರದ ಖಾಸಗೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಪಿಯು ವಿದ್ಯಾಭ್ಯಾಸ ಮಾಡಿದ್ದ ಸುಪ್ರಜ್ ಶೆಟ್ಟಿಗೆ ಮೆಡಿಕಲ್ ಓದುವ ಆಸೆಯಿತ್ತೆನ್ನಲಾಗಿದೆ. ಆದರೆ ಆತನಿಗೆ ಬೆಂಗಳೂರಿನಲ್ಲಿ ಇಂಜಿನಿಯರ್ ಸೀಟ್ ದೊರಕಿತ್ತು. ಇದು ಆತನಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಆತನ ಮನೆಯವರು ಮಗನಿಗೆ ಬುದ್ಧಿವಾದ ಹೇಳಿ ಬೆಂಗಳೂರಿಗೆ ಕಳುಹಿಸಲು ಬಟ್ಟೆಬರೆಗಳನ್ನು ಪ್ಯಾಕ್ ಮಾಡಿದ್ದರೆನ್ನಲಾಗಿದೆ. ಎಲ್ಲವೂ ಸರಿಯಾಗಿದ್ದರೆ ಗುರುವಾರ ಆತ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ಬುಧವಾರ ಸಂಜೆ ಹಳ್ನಾಡು ಮನೆಯ ಸಮೀಪದ ಹೊಳೆಯ ಬದಿಯಲ್ಲಿ ತನ್ನ ಚಪ್ಪಲಿ ಮತ್ತು ಮೊಬೈಲ್ ಬಿಟ್ಟಿರುವುದು ಕಂಡು ಬಂದಿದೆ.

ಇದರಿಂದ ಅನುಮಾನಗೊಂಡ ಮನೆಯವರು ಹಾಗೂ ಸ್ಥಳೀಯತು ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ. ಗುರುವಾರ ಮಧ್ಯಾಹ್ನ ಬಾಲಕನ ಮೃತದೇಹ ಅದೇ ಹೊಳೆಯಲ್ಲಿ ಪತ್ತೆಯಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!