BlogCrime newsEducationHighlightsHuman storiesLocal newsObituaryOthersState newsTop StoriesTrending

ಕೋಟೇಶ್ವರ: ಎಂ.ಎಸ್. ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ

Aware others:

ಕುಂದಾಪುರ: ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕ ಬುಧವಾರ ರಾತ್ರಿ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಂಗಳೂರು ಪಂಚಾಯತ್ ಹಿಂದುಗಡೆ ನಿವಾಸಿ ನಾರಾಯಣ ಗಾಣಿಗರ ತಂಗಿ ಪದ್ಮಾವತಿ ಗಾಣಿಗರ ಮಗ ಗೌರೀಶ್ ಗಾಣಿಗ (28) ಎಂಬಾತ ಆತ್ಮಹ್ತತ್ಯೆ ಮಾಡಿಕೊಂಡಾತ.

ತುಂಬಾ ಸರಳ ವ್ಯಕ್ತಿತ್ವದ ಗೌರೀಶ್, ಎಂ.ಬಿ.ಬಿ.ಎಸ್. ಮುಗಿಸಿದ ಬಳಿಕ ಕುಂದಾಪುರ ಸರ್ಕಾರೀ ಆಸ್ಪತ್ರೆಯಲ್ಲಿ ಪ್ರಕ್ಟೀಸ್ ಮಾಡುತ್ತಿದ್ದ. ಬಳಿಕ ಉನ್ನತ ವ್ಯಾಸಂಗ ಎಂ.ಎಸ್. ಮಾಡಲು ಪರೀಕ್ಷೆ ಬರೆದಿದ್ದ ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ಗೌರೀಶ್ ಖಿನ್ನನಾಗಿದ್ದ ಎನ್ನಲಾಗಿದೆ. ಬುಧವಾರ ಸಂಜೆ ಮನೆಯಿಂದ ಹೋದಾತ ನಾಫತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್ ಮೊಬೈಲ್ ಲೊಕೇಶನ್ ಕೋಟೇಶ್ವರ ಕೆರೆ ಬಳಿಯಲ್ಲಿ ತೋರಿಸುತ್ತಿತ್ತು ಎನ್ನಲಾಗಿದೆ. ಅಲ್ಲಿ ಹೋದಾಗ ಆತನ ಬೈಕ್ ದೇವಸ್ಥಾನದ ಮುಂಭಾಗದಲ್ಲಿ ನಿಲ್ಲಿಸಲಾಗಿತ್ತು. ಮೊಬೈಲ್ ಫೋನ್ ಮತ್ತು ಚಪ್ಪಲಿಯನ್ನು ಕೆರೆ ಸಮೀಪ ಒಂದು ಮೂಲೆಯಲ್ಲಿ ಕವುಚಿ ಇಡಲಾಗಿತ್ತು ಎಂದು ಎಂದು ತಿಳಿದು ಬಂದಿದೆ. ತಡರಾತ್ರಿಯಾದ್ದರಿಂದ ಕೆರೆಯಲ್ಲಿ ಹುಡುಕಿರಲಿಲ್ಲ.  ಗುರುವಾರ ಬೆಳಿಗ್ಗೆ ಕೋಟೇಶ್ವರ ಕೆರೆಯಲ್ಲಿ ಹುಡುಕಾಡಿದಾಗ ಗೌರೀಶ್ ದೇಹ ಪತ್ತೆಯಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!