BlogAccidentCrime newsGovernmentHealthHighlightsLifestyleLocal newsOthersState newsTop StoriesTrending

ಶಿರಿಯಾರದಲ್ಲಿ ನಾಯಿ ಹೊತ್ತೊಯ್ದ ಚಿರತೆ – ಗ್ರಾಮಸ್ಥರಲ್ಲಿ ಆತಂಕ

Aware others:

ಕುಂದಾಪುರ: ಶಿರಿಯಾರ ಸಮೀಪದ ನೈಲಾಡಿ ಎಂಬಲ್ಲಿ ರಾತ್ರೋರಾತ್ರಿ ಕಳ್ಳಬೇಟೆ ನಡೆಸಿದ ಚಿರತೆಯೊಂದು ಮನೆಯ ಆವರಣಕ್ಕೆ ನುಗ್ಗಿ ಮಲಗಿದ್ದ ನಾಯಿಯೊಂದನ್ನು ಕದ್ದೊಯ್ದ ಘಟನೆ ನಡೆದಿದೆ. ನೈಲಾಡಿಯ  ಸದಾಶಿವ ಕುಲಾಲ್ ಅವರ ಮನೆಯ ಅಂಗಳದಲ್ಲಿ ಮಲಗಿದ್ದ ಸಾಕು ನಾಯಿಯನ್ನು ಕ್ಷಣಾರ್ಧದಲ್ಲಿ ಹೊತ್ತು ಕೊಂಡು ಹೋಗಿದ್ದು, ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

 ಈ ಹಿಂದಿನಿಂದಲೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಚಿರತೆ ಕಾಟ ವಿಪರೀತ ಆಗಿದ್ದು ಜನರಲ್ಲಿ ಭಯಭಿತಿ ಹುಟ್ಟಿಸಿದೆ. ಸಾರ್ವಜನಿಕರು ರಾತ್ರಿ ಸಂಚರಿಸುವುದೇ ಕಷ್ಟಕರವಾಗಿದೆ. ಇದರ ಬಗ್ಗೆ ಅರಣ್ಯ ಇಲಾಖೆ ಸ್ಪಂದಿಸಿ ಚಿರತೆಯನ್ನು ಸೆರೆಹಿಡಿಯುವ ಪ್ರಯತ್ನ ಮಾಡಬೇಕಿದೆ ಎಂದು ಸಾರವಜನಿಕರು ಆಗ್ರಹಿಸಿದ್ದಾರೆ.

ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ


Aware others:

Leave a Reply

Your email address will not be published. Required fields are marked *

error: Content is protected !!