BlogEconomyFashionHighlightsLifestyleLocal newsNational NewsOthersState newsSuccess storiesTop StoriesTrending

ಸಮಾಜಸೇವೆಯೇ ರೋಟರಿ ಧ್ಯೇಯ: ಜಿಲ್ಲಾ ಗವರ್ನರ್  ರೋ. ಸಿಎ ದೇವ್ ಆನಂದ್

Aware others:

ಬೈಂದೂರು: ಸಮುದಾಯದ ಸೇವೆಯಲ್ಲಿ ರೋಟರಿ ಸದಾ ಮುಂಚೂಣಿಯಲ್ಲಿದ್ದು, ಹತ್ತಾರು ಜನಪರ ಯೋಜನೆಗಳ ಮೂಲಕ ಜನರಿಗೆ ನೆರವಾಗುವುದಲ್ಲದೇ, ಧೀರ್ಘಕಾಲದ ತನಕ ಅವರ ಮನಸ್ಸಿನಲ್ಲಿಯೂ ಉಳಿಯುವಂತಾಗುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್  ಸಿಎ ದೇವ್ ಆನಂದ್ ಹೇಳಿದರು.

ಅವರು ಮಂಗಳವಾರ ರೋಟರಿ ಕ್ಲಬ್ ಬೈಂದೂರು ವತಿಯಿಂದ ಇಲ್ಲಿನ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ 2024-25ನೇ ಸಾಲಿನ ರೋಟರಿ ಸಾರ್ವಜನಿಕ ಸೇವೆ ಯೋಜನೆಯಡಿ ನಿರ್ಮಿಸಲಾದ ನೂತನರೈಲು ಪ್ರಯಾಣಿಕರ ತಂಗುದಾಣವನ್ನು ಲೋಕಾರ್ಪಣೆಗೊಳಿಸಿ  ಮಾತನಾಡಿದರು.

ಕೊಂಕಣ್ ರೈಲ್ವೆಯ ಸೀನಿಯರ್ ರೀಜನಲ್ ಟ್ರಾಫಿಕ್ ಮ್ಯಾನೇಜರ್ ದಿಲೀಪ್ ಡಿ. ಭಟ್‌ ರೋಟರಿ ಮಾಹಿತಿ ಫಲಕವನ್ನು ಉದ್ಘಾಟಿಸಿದರು. ಮೂಕಾಂಬಿಕಾ ರೈಲ್ವೆಯಾತ್ರಿ ಸಂಘದ ಅಧ್ಯಕ್ಷ ಜಯಾನಂದ ಹೋಬಳಿದಾರ್ ಅವರು ರೋಟರಿಯಿಂದ ಸಾರ್ವಜನಿಕರಿಗಾಗಿ ನೀಡಿದ 3 ಬೆಂಚುಗಳನ್ನು ಲೋಕಾರ್ಪಣೆಗೊಳಿಸಿದರು. ರೈಲು ತಂಗುದಾಣ ನಿರ್ಮಾಣಕ್ಕೆ ದೇಣಿಗೆ ನೀಡಿದ ಸುಮತಿ ಸುಬ್ರಾಯ ರೇವಣ್ಕರ್ ಶಿರೂರು ಹಾಗೂ ಕುಟುಂಬಿಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೈಂದೂರು ರೋಟರಿ ಅಧ್ಯಕ್ಷ ಮೋಹನ್ ರೇವಣ್ಕರ್ ಮಾತನಾಡಿ, ರೈಲ್ವೆ ಯಾತ್ರಿ ಸಂಘದಿಂದ ಮನವಿ ಬಂದ ಹಿನ್ನೆಲೆಯಲ್ಲಿ ದಾನಿಗಳ ನೆರವಿನಿಂದ ಸುಸಜ್ಜಿತವಾದ ರೈಲ್ವೆ ನಿಲ್ದಾಣವನ್ನು ನಿರ್ಮಿಸಲಾಗಿದ್ದು, ಬೈಂದೂರು ರೈಲ್ವೆ ನಿಲ್ದಾಣದ ಮೂಲಕ ಪ್ರತಿನಿತ್ಯ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರಿಗೆ ಮಳೆ ಹಾಗೂ ಬಿಸಿಲಿನಿಂದ ರಕ್ಷಣೆ ಸಿಗಲಿದೆ ಎಂದರು.

ಈ ಸಂದರ್ಭ ಸಹಾಯಕ ಗವರ್ನರ್ ಡಾ. ಬಿ. ರಾಜೇಂದ್ರ ಶೆಟ್ಟಿ, ರಾಷ್ಟ್ರೀಯ ರೈಲ್ವೆ ಬಳಕೆದಾರರ ಸಲಹಾ ಮಂಡಳಿಯ ಮಾಜಿ ಸದಸ್ಯ ಕೆ. ವೆಂಕಟೇಶ ಕಿಣಿ, ಬೈಂದೂರು ಟೆಂಪೋ ರಿಕ್ಷಾ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಅಧ್ಯಕ್ಷ ಸುರೇಶ್ ಬಟ್ವಾಡಿ, ವಲಯ ಸೇನಾನಿ ಪ್ರದೀಪ್ ಡಿ.ಕೆ ಮೊದಲಾದವರು ಉಪಸ್ಥಿತರಿದ್ದರು. ರೂಪಾ ರೇವಣ್ಕರ್ ಪ್ರಾರ್ಥಿಸಿದರು. ಬೈಂದೂರು ರೋಟರಿ ಅಧ್ಯಕ್ಷ ಮೋಹನ್ ರೇವಣ್ಕರ್ ಸ್ವಾಗತಿಸಿ, ಕಾರ್ಯದರ್ಶಿ ಸುನಿಲ್ ಹೆಚ್.ಜಿ. ಬೈಂದೂರು ವಂದಿಸಿದರು. ಬೈಂದೂರು ರೋಟರಿ ಡಿಸ್ಟಿಕ್ ಪ್ರಾಜೆಕ್ಟ್ ಛೇರ್ಮನ್ ಸುಧಾಕರ ಪಿ.ಬೈಂದೂರು ಕಾರ್ಯಕ್ರಮ ನಿರೂಪಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!