ಅತ್ಯುತ್ತಮ ಕಂದಾಯ ಗ್ರಾಮ ಅಡಳಿತಾಧಿಕಾರಿ -2024 ಪ್ರಶಸ್ತಿಗೆ ಸುಚಿತ್ರ ಎ ಆಯ್ಕೆ
ಉಡುಪಿ :ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳನ್ನು ಗುರುತಿಸಿ ಕೊಡಮಾಡುವ ರಾಜ್ಯ ಅತ್ಯುತ್ತಮ ಕಂದಾಯ ಅಧಿಕಾರಿ 2024 ಪ್ರಶಸ್ತಿಯನ್ನು ಉಡುಪಿ ಜಿಲ್ಲೆಯಿಂದ ಕಾರ್ಕಳ ತಾಲೂಕಿನ ನೀರೆ ಗ್ರಾಮ ಅಡಳಿತ ಅಧಿಕಾರಿ ಸುಚಿತ್ರ ಎ ಪಡೆದುಕೊಂಡಿದ್ದಾರೆ.

ಸೆಪ್ಟೆಂಬರ್ 27ರಂದು ಬೆಂಗಳೂರಿನಲ್ಲಿ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರಗುವ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.