ಕುಂಭಾಶಿ: ಶಿಕ್ಷಕರು ಪ್ರಾಮಾಣಿಕರಾದರೆ ಸಮಾಜ ಸದೃಢವಾಗುತ್ತದೆ – ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಕ್ ಅಭಿಮತ
ಕುಂಭಾಸಿಯಲ್ಲಿ ಎಸ್.ಡಿ.ಎಂ.ಸಿ ಸಮನ್ವಯ ಜಿಲ್ಲಾ ಸಮಿತಿ ಕೊಡಮಾಡುವ ಪ್ರಶಸ್ತಿ ವಿತರಣೆ ಮತ್ತು ಮಾಹಿತಿ ಕಾರ್ಯಗಾರ
ಕುಂದಾಪುರ: ಇಡೀ ದೇಶದ ವ್ಯವಸ್ಥೆ ಶಿಕ್ಷಕರ ಪ್ರಾಮಾಣಿಕತೆ ಮೇಲೆ ನಿಂತಿದೆ. ಶಿಕ್ಷಕರು ಪ್ರಾಮಾಣಿಕರಾದರೆ ಸಮಾಜ ಸುದ್ರುಡವಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಹೇಳಿದರು.





ಅವರು ಭಾನುವಾರ ಆನೆಗುಡ್ಡೆ ಶ್ರೀ ವಿನಾಯಕ ಸಭಾ ಗೃಹದಲ್ಲಿ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ, ಉಡುಪಿ ಜಿಲ್ಲೆ ಇದರ ವತಿಯಿಂದ ತಾಲೂಕು ಕಾನೂನು ಸೇವೆಗಳ ಸಮಿತಿ, ಕುಂದಾಪುರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ವಕೀಲರ ಸಂಘ, ಬಾರ್ ಅಸೋಸಿಯೇಶನ್ ಕುಂದಾಪುರ, ಗೀತಾ ಹೆಚ್. ಎಸ್.ಎನ್ ಫೌಂಡೇಶನ್ ಕೋಟೇಶ್ವರ, ಶ್ರೀ ಸಿದ್ಧಿವಿನಾಯಕ ದೇವಸ್ಥಾನ, ಆನೆಗುಡ್ಡೆ, ಶ್ರೀ ವಿನಾಯಕ ಸಭಾಗೃಹ, ಕುಂಭಾಶಿ ಮಗು ಮತ್ತು ಕಾನೂನು ಕೇಂದ್ರ, ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿರ್ವಸಿಟಿ ಬೆಂಗಳೂರು ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ 2024 -2025 ನೇ ಸಾಲಿನ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿ ಪ್ರಧಾನ, ಗುರುವಂದನಾ ಕಾರ್ಯಕ್ರಮ, ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಮತ್ತುಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ. ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಮಕ್ಕಳ ಹಕ್ಕುಗಳ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.





ಸನ್ಮಾನ ಸ್ವೀಕರಿಸಿ ಮಾತನಾಡಿದ ಉದ್ಯಮಿ, ಗೀತಾನಂದ ಫೌಂಡೇಶನ್ ನ ಆನಂದ ಸಿ ಕುಂದರ್ ಮಾತನಾಡಿ, ಒಂದು ಶಾಲೆಯ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ. ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದರು.





ಇದೇ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯನಿ ಸುಮನ ಕಲ್ಯಾ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಬಳಿಕ ಶಿಕ್ಷಕರಾದ ಸಹದೇವಿ, ಶಂಕರ ಶಿರೂರು, ಸುಧಾ ಸುರೇಶ್, ಮಂಜು ಎಂ ಪೂಜಾರಿ, ಕುಸುಮ ಜೋಗಿ, ಗಣೇಶ್ ಶೆಟ್ಟಿ, ಆಜಾದ್ ಮೊಹಮ್ಮದ್, ದೀಪಿಕ ನಾರಾಯಣ, ಬಸವರಾಜ್ ಸಿ ತಾವರಗಿ, ನಾಗರತ್ನ ಎಂ ಆರ್, ಸಂತೋಷ್, ರಾಜು ಎನ್, ಐವನ್ ಸಂತೋಷ್ ಸಾಲಿನ್ಸ್, ವಿಜಯಕುಮಾರ್ ಸೇರಿದಂತೆ 14 ಮಂದಿ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಚಿತ್ತೂರು ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ರವಿರಾಜ್ ಶೆಟ್ಟಿಯವರಿಗೆ ಜಿಲ್ಲಾ ಅತ್ಯುತ್ತಮ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಸ್ತಿ, ಜಿಲ್ಲೆಯ ಆರು ಶಾಲೆಗಳಿಗೆ ಎಸ್.ಡಿ.ಎಂ.ಸಿ. ಅತ್ಯುತ್ತಮ ಶಾಲೆ ಪ್ರಶಸ್ತಿಗಳ ವಿತರಣೆ ಸಮಾರಂಭ ನಡೆಯಿತು.





ಸಭಾಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಸಿ. ಸಮನ್ವಯ ಕೇಂದ್ರ ವೇದಿಕೆ ಉಡುಪಿ ಇದರ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರ್ ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು. ತಾಲೂಕು ಘಟಕದ ಅಧ್ಯಕ್ಷ ಎಸ್ ವಿ ನಾಗರಾಜ್ ಪ್ರಸ್ತಾಪಿಸಿದರು.





ನ್ಯಾಯಾಧೀಶರಾದ ರಾಜು ಎನ್., ಎಮ್ ಪುರುಷೋತ್ತಮ, ಆನಂದ ಸಿ. ಕುಂದರ್, ಟ್ರಸ್ಟ್ ಅಧ್ಯಕ್ಷ ಶಂಕರ ಐತಾಳ್, ಪಡಿ ಸಂಸ್ಥೆಯ ರೆನ್ನಿ ಡಿಸೋಜ, ಸಂಸ್ಥೆಯ ರಾಜ್ಯ ಸಂಚಾಲಕ ಮೈದಿನ್ ಕುಟ್ಟಿ, ಕುಂಭಾಶಿಯ ವಿನಾಯಕ ಸಭಾಗೃಹದ ಮಾಲಕ ರವಿರಾಜ್ ಉಪಾಧ್ಯಾಯ, ಗೌರವ ಸಲಹೆಗಾರರಾದ ಮಲ್ಲಿಕಾ ಬಾಲಕೃಷ್ಣ ಪೂಜಾರಿ ಮೊದಲಾದವರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಘಟಕದ ಅಧ್ಯಕ್ಷ ಎಸ್ ವಿ ನಾಗರಾಜ್ ಸ್ವಾಗತಿಸಿದರು, ಉಪಾಧ್ಯಕ್ಷ ಉಪಾಧ್ಯಕ್ಷ ಉಷಾ ರಮೇಶ್ ವಂದಿಸಿದರು. ಉಪಾಧ್ಯಕ್ಷ ರಾಜಶೇಖರ್ ಹಾಗೂ ಸಂಘಟನಾ ಕಾರ್ಯದರ್ಶಿ ಶೋಭಾ ಶಾಂತರಾಜ್ ಕಾರ್ಯಕ್ರಮ ನಿರೂಪಿಸಿದರು.