ಕುಂದಾಪುರ: ಎನ್.ಎನ್.ಒ ಕಮ್ಯೂನಿಟಿ ಸೆಂಟರ್ನಿಂದ ಸಹಾಯಧನ ಹಸ್ತಾಂತರ ಹಾಗೂ ಸನ್ಮಾನ
ಕುಂದಾಪುರ: ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಕುಂದಾಪುರ, ಬೈತುಲ್ ಮಾಲ್ ಹಂಗಾರಕಟ್ಟೆ, ನಮ್ಮ ನಾಡ ಒಕ್ಕೂಟ (ರಿ.) ಉಡುಪಿ ಜಿಲ್ಲಾ ಸಮಿತಿ, ತವಕ್ಕಲ್ ಯಂಗ್ ಮೆನ್ಸ್ ಅಸೋಸಿಯೇಶನ್ ಕಟಪಾಡಿ, ಟೀಮ್ ಮಲೆನಾಡು ಹ್ಯೂಮ್ಯಾನಿಟೇರಿಯನ್ ಟ್ರಸ್ಟ್ ರಿ ಬೆಳ್ವೆ ಇವರ ಆಶ್ರಯದಲ್ಲಿ ಸಹಾಯಧನ ಹಸ್ತಾಂತರ ಹಾಗೂ ಸನ್ಮಾನ ಕಾರ್ಯಕ್ರಮ ಭಾನುವಾರ ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಸಭಾಂಗಣದಲ್ಲಿ ನಡೆಯಿತು. ಎನ್.ಎನ್.ಒ ಕಮ್ಯೂನಿಟಿ ಸೆಂಟರ್ನ ಪ್ರದಾನ ಕಾರ್ಯದರ್ಶಿ ಹುಸೇನ್ ಹೈಕಾಡಿ ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು.





ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಅಧ್ಯಕ್ಷ ಅಬ್ದುಲ್ ಮುನಾಫ್ ಹಂಗಾರಕಟ್ಟೆ ಸಹಾಯಧನ ಹಸ್ತಾಂತರ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಫಾರ್ಮ್ ಡಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುವ ಕುಂದಾಪುರ ಕಟ್ಟೇರಿ ನಿವಾಸಿ ಅಜ್ಞಾಲುನ್ನಿಸಾರ ಅವರಿಗೆ ಸಹಾಯಧನ ಹಸ್ತಾಂತರಿಸಿದರು. ಇತ್ತೀಚೆಗಷ್ಟೇ ಸ್ವಾಮಿ ವಿವೇಕಾನಂದ ಪ್ರಶಸ್ತಿ ಪಡೆದ ಎಮ್. ಇಸ್ಟಾಲ್ ಮನ್ನಾ ಉಡುಪಿ ಇವರಿಗೆ ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಸನ್ಮಾನಿಸಿ ಗೌರವಿಸಲಾಯಿತು. ಕೋಡಿ ಬ್ಯಾರೀಸ್ ಕಾಲೇಜಿನ ಬಿ.ಸಿ.ಎ. ವಿಭಾಗದಲ್ಲಿ 100/100 ಅಂಕ ಪಡೆದ ವಿದ್ಯಾರ್ಥಿನಿ ಸಫ್ನಾಝ್ ಹಾಗೂ ಬಿ.ಸಿ.ಎ 5 ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ಆಯಿಷಾ ಸಿದ್ದಿಕ್ ಅವರನ್ನು ಸನ್ಮಾನಿಸಲಾಯಿತು.




ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿಯ ಕೋಶಾಧಿಕಾರಿ ಪೀರು ಸಾಹೇಬ್, ಹಂಗಾರಕಟ್ಟೆ ಬೈತುಲ್ ಮಾಲ್ ಖಜಾಂಚಿ ಜವಾನ್ ಅಕ್ಬರ್, ಕಟಪಾಡಿ ತವಕ್ಕಲ್ ಯಂಗ್ ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಯು.ಎ. ರಶೀದ್, ಟೀಮ್ ಮಲೆನಾಡು ಹ್ಯೂಮ್ಯಾನಿಟೇರಿಯನ್ ಟ್ರಸ್ಟ್ ರಿ ಬೆಳ್ವೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ರಫೀಕ್ ಅಜೆಕಾರ್, ನಮ್ಮ ನಾಡ ಒಕ್ಕೂಟ ಉಡುಪಿ ಪ್ರಧಾನ ಕಾರ್ಯದರ್ಶಿ ಜಹೀರ್ ನಾಕುದ್, ಟೀಮ್ ಮಲೆನಾಡು ಹ್ಯೂಮ್ಯಾನಿಟೇರಿಯನ್ ಟ್ರಸ್ಟ್ ರಿ ಬೆಳ್ವೆ ಟ್ರಸ್ಟಿ ಮೊಹಮ್ಮದ್ ರೆಯನ್ ಬೆಳ್ವೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.




ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಪ್ರಧಾನ ಕಾರ್ಯದರ್ಶಿ ಹುಸೈನ್ ಹೈಕಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ನಮ್ಮ ನಾಡ ಒಕ್ಕೂಟ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಸದಸ್ಯ ಪಳ್ಳಿ ಉಸ್ಮಾನ್ ಗುಲ್ವಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು