ಎಂಎಲ್ಸಿ ಬೈ ಎಲೆಕ್ಷನ್ – ಕಾಂಗ್ರೆಸ್ ನಿಂದ ರಾಜು ಪೂಜಾರಿ ಆಯ್ಕೆ
ಕುಂದಾಪುರ: ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರ ತೆರವಾದ ಸ್ಥಾನಕ್ಕೆ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರು ಆಯ್ಕೆಯಾಗಿದ್ದಾರೆ.

ಅಕ್ಟೋಬರ್ 2 ರಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ಈ ಆದೇಶವನ್ನು ಹೊರಡಿಸಿದ್ದಾರೆ.

ಅಕ್ಟೋಬರ್ 1ರಂದು ಭಾರತೀಯ ಜನತಾ ಪಕ್ಷದ ಕೇಂದ್ರೀಯ ಮುಖಂಡ ಅರುಣ್ ಸಿಂಗ್ ಅವರು ಬಿಜೆಪಿಯ ಅಭ್ಯರ್ಥಿಯನ್ನಾಗಿ ಪುತ್ತೂರಿನ ಕಿಶೋರ್ ಕುಮಾರ್ ಆಯ್ಕೆ ಮಾಡಿ ಆದೇಶ ನೀಡಿದ್ದರು.

ಇದೀಗ ಬಿಜೆಪಿಯಿಂದ ಕಿಶೋರ್ ಕುಮಾರ್ ಹಾಗೂ ಕಾಂಗ್ರೆಸ್ ನಿಂದ ರಾಜು ಪೂಜಾರಿ ಅಭ್ಯರ್ಥಿ ಆಯ್ಕೆ ಖಚಿತವಾದಂತಾಗಿದ್ದು ಚುನಾವಣಾ ಕಣ ರಂಗೇರಲಿದೆ ಎನ್ನಲಾಗುತ್ತಿದೆ.