BlogElectionGovernmentHighlightsHuman storiesLifestyleLocal newsOthersPoliticsReligionState newsTop StoriesTrending

ಕೊಲ್ಲೂರು: ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಕೆ. ಬಾಬು ಶೆಟ್ಟಿ ಆಯ್ಕೆ

Aware others:

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಬಾಬು ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೆಪ್ಟಂಬರ್ 20ರಂದು ದೇವಸ್ಥಾನದ ನೂತ ವ್ಯವಸ್ಥಾಪನಾ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿ ಆದೇಶ ಹೊರಡಿಸಿತ್ತು. ಅದರಂತೆ  ಅರ್ಚಕ ಮಹಾಲಿಂಗ ನಾಯ್ಕ್‌, ಧನಾಕ್ಷಿ ವಿಶ್ವನಾಥ, ಸುಧಾ ಕೆ ಪಡುವರಿ, ಕೆ.  ಸುರೇಂದ್ರ ಶೆಟ್ಟಿ, ಅಭಿಲಾಷ್‌ ಪಿ.ವಿ, ಯು. ರಾಜೇಶ್‌ ಕಾರಂತ್‌, ರಘುರಾಮ ದೇವಾಡಿಗ ಹಾಗೂ ಕೆ. ಬಾಬು ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿತ್ತು.

ನೂತನ ಆಡಳಿತ ಸಮಿತಿ ರಚನೆಯ ವಿರುದ್ಧ ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ  ಮಾಜೀ ಅಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ ಅವರು ಉಚ್ಚ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ನಂತರದ ಬೆಳವಣಿಗೆಯಲ್ಲಿ ದೇವಳದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಶನಿವಾರ ನೂತನ ವ್ಯವಸ್ಥಾಪನಾ ಸಮಿತಿಯ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಬಾಬು ಶೆಟ್ಟಿಯವರನ್ನು ಸರ್ವಾನುಮತದಿಂದ ಆರಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್  ಶೆಟ್ಟಿ ಕಾರ್ಯನಿರ್ವಹಿಸಲಿದ್ದಾರೆ. ಕುಂದಾಪುರ ಉಪವಿಭಾಗಾಧಿಕಾರಿ ಎಸಿ ಮಹೇಶ್ಚಂದ್ರ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಬಳಿಕ ಮಾತನಾಡಿದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಕೊಲ್ಲೂರು ಧಾರ್ಮಿಕ ಕೇಂದ್ರವಾಗಿ ಜಗತ್ತಿನಲ್ಲಿಯೇ ಗುರುತಿಸಿಕೊಂಡಿದೆ. ಅಲ್ಲದೇ ಪ್ರವಾಸೋದ್ಯಮ ತಾಣವನ್ನಾಗಿಯೂ ಅಭಿವೃದ್ಧಿಪಡಿಸುವ ಜವಾಬ್ಧಾರಿ ನಮ್ಮ ಮೇಲಿದೆ. ಮೂಕಾಂಬಿಕೆಯ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ವ್ಯವಸ್ಥಾಪನಾ ಸಮಿತಿಯ ಸರ್ವ ಸದಸ್ಯರ ಜೊತೆ ಸೇರಿ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸುವುದಾಗಿ ತಿಳಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!