ಚುನಾವಣಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿಲ್ಲ – ಶಿಕ್ಷಕ ಕರುಣಾಕರ ಶೆಟ್ಟಿ ಸ್ಪಷ್ಟನೆ

ಕುಂದಾಪುರ: ಭಾರತದ ಚುನಾವಣಾ ಆಯೋಗದ ಅಧಿಸೂಚನೆಯಂತೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಉಪಚುನಾವಣೆ 2024ರಲ್ಲಿ ನಡೆಯುವ ಚುನಾವಣೆಯಲ್ಲಿ ಚುನಾವಣಾಧಿಕಾರಿಗಳು ಹೊರಡಿಸಿದ ಆದೇಶದಲ್ಲಿ ನಡೆದಿದೆಯನ್ನಲಾದ ಕಾನೂನು ಬಾಹಿರ ಅಧಿಕಾರಿಗಳ ಪಟ್ಟಿಯ ಬಗ್ಗೆ ಸಹ ಶಿಕ್ಷಕ ಕರುಣಾಕರ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.
ದೂರವಾಣಿ ಮೂಲಕ ಮಾತನಾಡಿದ ಅವರು, ನಾನು ಯಾವುದೇ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿಲ್ಲ. ಈ ಬಗ್ಗೆ ಯಾವುದೇ ದೇವಸ್ಥಾನದಲ್ಲಿ ಬೇಕಾದರೂ ಬಂದು ಪ್ರಮಾಣ ಮಾಡುತ್ತೇನೆ ಎಂದಿದ್ದಾರೆ. ಅಲ್ಲದೇ ಅಧಿಕಾರಿಗಳು ಮಾಡಿದ ತಪ್ಪಿಗೆ ನನ್ನನ್ನು ಹೊಣೆ ಮಾಡಬಾರದು ಎಂದೂ ವಿನಂತಿಸಿದ್ದಾರೆ.
ಶಿಕ್ಷಕ ಕರುಣಾಕರ ಶೆಟ್ಟಿ ಸ್ಪಷ್ಟೀಕರಣದ ಬಳಿಕ ಇದೀಗ ಚುನಾವಣಾಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಳೆದಿರುವುದು ಸ್ಪಷ್ಟವಾದಂತಿದೆ.