BlogElectionGovernmentHighlightsLifestyleLocal newsOthersPoliticsReligionState newsTop StoriesTrending

ಬೈಂದೂರು: ಪ್ರತೀ ಗ್ರಾಮದಲ್ಲೂ ಯುವ ನಾಯಕರನ್ನು ಕಾಂಗ್ರೆಸ್ ಬೆಳೆಸಲಿದೆ – ಕೆ. ಗೋಪಾಲ್ ಪೂಜಾರಿ

Aware others:

ಕುಂದಾಪುರ: ನನಗೆ ಅಧಿಕಾರ ಇಲ್ಲದೇ ಇದ್ದರೂ ನನ್ನ  ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಯುವ ಮನಸ್ಸುಗಳು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದು ಪ್ರತೀ ಗ್ರಾಮಗಳಲ್ಲಿ ಕಾಂಗ್ರೆಸ್ ಯುವ ನಾಯಕರನ್ನು ಬೆಳೆಸುವುದರ ಜೊತೆಗೆ ಪ್ರತೀ ಬೂತ್ ಮಟ್ಟದಲ್ಲಿ ಪಕ್ಷ ಕಟ್ಟುವ ಕೆಲಸ ನಿರಂತರವಾಗಿ‌ ನಡೆಯಲಿದೆ. ಆ ಮೂಲಕ ಮುಂದೆ ನಡೆಯಲಿರುವ ಜಿಲ್ಲಾ ಪಂಚಾಯತ್ ಹಾಗೂ ಪಂಚಗಂಗಾ ಸೊಸೈಟಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಬೈಂದೂರಿನ‌ ಮಾಜಿ‌ ಶಾಸಕ‌ ಕೆ.ಗೋಪಾಲ ಪೂಜಾರಿ ಹೇಳಿದರು.

ಅವರು ಭಾನುವಾರ ಸಂಜೆ ಕಟ್‌ಬೇಲ್ತೂರಿನಲ್ಲಿ ನಡೆದ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕ್ಷೇತ್ರದ ಅಭಿವೃದ್ದಿಗಾಗಿ ಅನುದಾನವನ್ನು ನೀಡುವಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳನ್ನು ಕೋರಿಕೊಂಡಿದ್ದು, ಅನುದಾನ ದೊರಕುವ ನಿರೀಕ್ಷೆಗಳಿದೆ ಎಂದ ಅವರು, ಯಾವುದೇ ಅಧಿಕಾರವಿಲ್ಲದಿದ್ದರೂ ಕ್ಷೇತ್ರದ ಜನತೆ ತೋರುತ್ತಿರುವ ಪ್ರೀತಿಯ ಋಣ ನನ್ನ ಮೇಲಿರುವುದರಿಂದ ಕ್ಷೇತ್ರದ ಅಭಿವೃದ್ದಿಗಾಗಿ ನನ್ನ‌ ಪ್ರಯತ್ನ ನಿರಂತರವಾಗಲಿದೆ ಎಂದರು.

ಇದೇ ಸಂದರ್ಭ ಹೆಮ್ಮಾಡಿ‌ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯು.ಸತ್ಯನಾರಾಯಣ್ ರಾವ್ ಹಾಗೂ‌ ಕಟ್‌ಬೇಲ್ತೂರು ಗ್ರಾಮ ಪಂಚಾಯಿತಿ ಮಾಜಿ‌ ಅಧ್ಯಕ್ಷ ನಾಗರಾಜ್ ಪುತ್ರನ್ ಅವರು, ತಮ್ಮ ಬೆಂಬಲಿಗರೊಂದಿಗೆ ಗೋಪಾಲ ಪೂಜಾರಿಯವರಿಂದ ಪಕ್ಷದ ಧ್ವಜ ಸ್ವೀಕರಿಸಿ ಶಾಲು ಪಡೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.‌

ಬಳಿಕ ಮಾತನಾಡಿದ ನಾಗರಾಜ್ ಪುತ್ರನ್, ಅಭಿವೃದ್ದಿಯ ಕಾರ್ಯಗಳಿಗಾಗಿ‌ ಪಕ್ಷಾತೀತವಾಗಿ‌ ಸ್ಪಂದಿಸುವ ಗೋಪಾಲ ಪೂಜಾರಿಯವರ ಗುಣ, ನಾಯಕತ್ವ ಒಪ್ಪಿ ಕಾಂಗ್ರೆಸ್ ಸೇರುತ್ತಿದ್ದು, ಮುಂದಿನ‌ ದಿನಗಳಲ್ಲಿ ಹಿತೈಷಿಗಳು ಹಾಗೂ ಸ್ನೇಹಿತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಪ್ರಾಮಾಣಿಕ ಪ್ರಯತ್ನ‌ ಮಾಡುತ್ತೇನೆ ಎಂದರು. 

ಹೆಮ್ಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ, ಸದಸ್ಯರಾದ ಸುಧಾಕರ್ ಎನ್ ದೇವಾಡಿಗ, ಜಲಜ ಮೊಗವೀರ, ಶಕಿಲಾ, ಗೋಳಿಹೊಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ‌ ವಸಂತ ಹೆಗ್ಡೆ ಇದ್ದರು. ವಂಡ್ಸೆ ಬ್ಲಾಕ್‌ ಕಾಂಗ್ರೆಸ್ ಸಮಿತಿ ಅಧ್ಯಕ್ಷ‌ ಪ್ರದೀಪ್‌ಕುಮಾರ್ ಶೆಟ್ಟಿ ಗುಡಿಬೆಟ್ಟು ಸ್ವಾಗತಿಸಿದರು. ಜಿಲ್ಲಾ‌ ಕೆಡಿಪಿ‌ ಸದಸ್ಯ ಪ್ರಸನ್ನ ಕುಮಾರ್ ಶೆಟ್ಟಿ‌ ಕೆರಾಡಿ ನಿರೂಪಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!