BlogGovernmentHealthHighlightsHuman storiesLocal newsOthersPoliticsTop StoriesTrending

*ಸಮೃದ್ಧ ಬೈಂದೂರು ಅಡಿಯಲ್ಲಿ ಹಳ್ಳಿಗಳಲ್ಲಿ ಉಚಿತ ವೈದ್ಯಕೀಯ ಶಿಬಿರ: ಶಾಸಕ ಗಂಟಿಹೊಳೆ*

Aware others:

ಬೈಂದೂರು : ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಸಮೃದ್ಧ ಬೈಂದೂರು ಕಲ್ಪನೆಯಡಿಯಲ್ಲಿ ಹಳ್ಳಿಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಪ್ರತಿಯೊಬ್ಬರೂ ಈ ಶಿಬಿರಗಳನ್ನು ಸದುಪಯೋಗಪಡಿಸಿಕೊಂಡಾಗ ಶಿಬಿರಗಳ ಉದ್ಧೇಶ ಸಾರ್ಥಕವಾಗುತ್ತದೆ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ ಹಲವು ಕಾಯಕ್ರಮ ನಡೆಸುತ್ತಿದ್ದೇವೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗವಾದ ಗಂಗಾನಾಡು, ಕ್ಯಾರ್ತೂರು ಭಾಗದಲ್ಲಿ ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ  ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಬೈಂದೂರು ಇದರ ಅಧ್ಯಕ್ಷ ಬಿ. ಎಸ್. ಸುರೇಶ್ ಶೆಟ್ಟಿ, ಗಂಗನಾಡು ಶಾಲಾ ಮುಖ್ಯಶಿಕ್ಷಕ ಪ್ರಭಾಕರ್ ಬಿಲ್ಲವ, ಎಸ್.ಡಿ.ಎಂ.ಸಿ ಅಧ್ಯಕ್ಷ ರಾಜು ಮರಾಠಿ ಹಾಗೂ ತಾಲೂಕಿನ 8 ಕ್ಕೂ ಅಧಿಕ ವೈದ್ಯರ ತಂಡ ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!