BlogEconomyEducationGovernmentHighlightsHuman storiesLifestyleLocal newsNational NewsOthersState newsTop StoriesTrending

*ಕುಂದಾಪುರ: ಎಸ್. ಡಿ. ಎಂ.ಸಿ. ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ಆಯ್ಕೆ*

Aware others:

ಕುಂದಾಪುರ: ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಅಬ್ದುಲ್ ಸಲಾಂ ಚಿತ್ತೂರು ಅವರು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ(ರಿ)ಯ ರಾಜ್ಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಎಸ್ಟಿಎಂಸಿ ಸಮನ್ವಯ ಕೇಂದ್ರ ವೇದಿಕೆ ಸಂಚಾಲಕ ಮೊಯಿದಿನ್ ಕುಟ್ಟಿ ಈ ಆದೇಶ ನೀಡಿರುವುದಾಗಿ ತಿಳಿದುಬಂದಿದೆ. 

ಶ್ರೀಯುತ ಅಬ್ದುಲ್ ಸಲಾಂ ಚಿತ್ತೂರು ಕುಂದಾಪುರ ತಾಲೂಕು ಉಡುಪಿ ಜಿಲ್ಲೆ ಇವರನ್ನು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ(ರಿ) ಇದರ ರಾಜ್ಯ ನಿರ್ದೇಶಕರಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಅದೇಶದವರೆಗೆ ನೇಮಕ ಮಾಡಿ ಆದೇಶಿಸಲಾಗಿದೆ

ಸರ್ಕಾರಿ ಶಾಲೆ ಉಳಿಸಿ ಅಭಿಯಾನದ ಮೂಲಕ ಉಡುಪಿ ಜಿಲ್ಲಾ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಜಿಲ್ಲಾಧ್ಯಕ್ಷರಾಗಿರುವ ಅಬ್ದುಲ್ ಸಲಾಂ ಚಿತ್ತೂರು ಅವರು, ಸರ್ಕಾರಿ ಶಾಲೆಗಳ ಉಳಿವಿಗೆ ಹೋರಾಟ ಮಾಡುತ್ತಾ ಬಂದವರು. ಇತ್ತೀಚೆಗಷ್ಟೇ ಎಸ್. ಡಿ.ಎಂ.ಸಿ. ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಅತ್ಯುತ್ತಮ ಶಾಲೆ, ಅತ್ಯುತ್ತಮ ಎಸ್. ಡಿ. ಎಂ.ಸಿ. ಪ್ರಶಸ್ತಿಗಳನ್ನು ನೀಡುವ ಮೂಲಕ ಸರ್ಕಾರ ಮಾಡಬೇಕಾದ ಕೆಲಸಗಳನ್ನು ತಾವೇ ಮಾಡಿ ತೋರಿಸಿದವರು. 

ಸರ್ಕಾರಿ ಶಾಲೆಯ ಬೆನ್ನೆಲುಬಾಗಿರುವ ಎಸ್.ಡಿ.ಎಂ.ಸಿ ಯನ್ನು ಸದೃಢಗೊಳಿಸುವ ಪಣತೊಟ್ಟಿರುವ ಎಸ್.ಡಿ.ಎಂ.ಸಿ. ಸಮನ್ವಯ ಸಮಿತಿಯ ರಾಜ್ಯ ನಿರ್ದೇಶಕರಾಗಿರುವುದು ಜಿಲ್ಲೆಗೆ ಶಕ್ತಿ ತುಂಬಿದೆ ಎಂದು ಉಡುಪಿ ಜಿಲ್ಲಾ ಎಸ್ ಡಿ.ಎಂ.ಸಿ. ಸಮಿತಿ ಹೇಳಿದೆ.


Aware others:

Leave a Reply

Your email address will not be published. Required fields are marked *

error: Content is protected !!