Blog

ವಿದ್ಯಾರಣ್ಯ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಲ್ಲಿ ದಸರಾ ಸಂಭ್ರಮ

Aware others:

ಕುಂದಾಪುರ: ಸಾಂಸ್ಕೃತಿಕ ಆಚರಣೆ, ಕಲೆ, ಸಂಸ್ಕಾರಕ್ಕೆ ಹೆಚ್ಚಿನ ಒತ್ತು ನೀಡುವ ಕುಂದಾಪುರದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ (ರಿ) ವತಿಯಿಂದ ಯಡಾಡಿ ಮತ್ಯಾಡಿಯಲ್ಲಿರುವ  ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭ ಚೌಡೇಶ್ವರಿ ಹುಲಿ ವೇಷ ಕುಣಿತ ತಂಡ ಕುಂದಾಪುರ ಇವರಿಂದ ಸಾಂಸ್ಕೃತಿಕ ಹುಲಿ ವೇಷ ಕುಣಿತ ಪ್ರದರ್ಶನ ನಡೆಯಿತು. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಹುಲಿವೇಷದೊಂದಿಗೆ ಹೆಜ್ಜೆ ಹಾಕಿದರು. ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ವಿದ್ಯಾರ್ಥಿಗಳಿಗೆ ರಾಜ್ಯದ ವಿವಿಧ ಭಾಗದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಆಚರಣೆಯ ಜ್ಞಾನವನ್ನು ಒದಗಿಸುವ ನಿಟ್ಟಿನಲ್ಲಿ ಬಹಳ ವೈಭವದಿಂದ ಹುಲಿ ವೇಷ ಕುಣಿತದ ಆಯೋಜನೆಯನ್ನು ಮಾಡಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಹೇಳಿದರು. .

ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್.ಬಿ.ಶೆಟ್ಟಿ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್. ಕೆ ಉಪಸ್ಥಿತರಿದ್ದರು. ಸಂಸ್ಥೆಯ ವಿದ್ಯಾರ್ಥಿಗಳು,  ಶಿಕ್ಷಕರು ಉಪನ್ಯಾಸಕ ವೃಂದದವರು, ಬೋಧಕೇತರ ಸಿಬ್ಬಂದಿಗಳು, ಪೋಷಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.


Aware others:

Leave a Reply

Your email address will not be published. Required fields are marked *

error: Content is protected !!