AccidentAuto worldBlogCrime newsHealthHighlightsLifestyleLocal newsOthersTop StoriesTrending

ನಾವುಂದ: ಪಾದಚಾರಿಗೆ ಕಾರು ಡಿಕ್ಕಿ – ಪಾದಚಾರಿ ಸಾವು

Aware others:

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಾವುಂದ ಎಂಬಲ್ಲಿ ಪಾದಾಚಾರಿ ಯೊಬ್ಬರಿಗೆ ಕಾರುಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಪಾದಾಚಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಕೆರ್ಗಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಕನ ಕಟ್ಟೆ ಸಮೀಪದ ಗೋಳಿಕಟ್ಟೆ ನಿವಾಸಿ ಮಂಜ ಎಂಬುವರ ಪುತ್ರ ಭದ್ರ (45) ಅಪಘಾತದಲ್ಲಿ ಸಾವನಪ್ಪಿದವರು.

ಭದ್ರ ಎಂಬುವರು ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ತಮ್ಮ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಭದ್ರಾ ಅವರನ್ನು ಗಂಗೊಳ್ಳಿಯ ಇಬ್ರಾಹಿಂ ಅವರಿಗೆ ಕರೆ ಮಾಡಿ ಕುಂದಾಪುರಕ್ಕೆ ಕರೆತರಲಾಯಿತು. ಆದರೆ ಅದಾಗಲೇ ಭದ್ರ ತೀರಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!