BlogCulturalEconomyEntertainmentFashionGovernmentHighlightsHuman storiesLifestyleLocal newsNational NewsOthersPoliticsSportsState newsSuccess storiesTechTop StoriesTrending

ಐದು ವರ್ಷಗಳಲ್ಲಿ ಬೈಂದೂರನ್ನು ಪ್ರವಾಸೋದ್ಯಮದ ಕೇಂದ್ರವನ್ನಾಗಿ ಮಾಡಲಾಗುವುದು ಸಂಸದ ಬಿ ವೈ ರಾಘವೇಂದ್ರ

Aware others:

ಬೈಂದೂರು: ಕರ್ನಾಟಕದ ಕುಗ್ರಾಮ ಎಂದೇ ಹೆಸರಾಗಿದ್ದ ಬೈಂದೂರು ಇದೀಗ ಸರ್ವತೋಮುಖ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ. ಈಗಾಗಲೇ ಬೈಂದೂರನ್ನು ಸಂಪರ್ಕಿಸುವ ಮೂರು ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳು ಅನುಮೋದನೆಗೊಂಡಿದೆ. ಮುಂದಿನ ಐದು ವರ್ಷಗಳಲ್ಲಿ ಬೈಂದೂರನ್ನು ಸಮಗ್ರ ಧಾರ್ಮಿಕ ಪ್ರವಾಸೋದ್ಯಮ ಕೇಂದ್ರವನ್ನಾಗಿ ರೂಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಅವರು ನವೆಂಬರ್ 1, 2 ಮತ್ತು 3ನೇ ತಾರೀಕಿನವರೆಗೆ ನಡೆಯಲಿರುವ ಬೈಂದೂರು ಉತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯತ್ತ ಕಾಮಗಾರಿಗಳು ನಡೆಯುತ್ತಿದ್ದು ಬೈಂದೂರು ಉತ್ಸವವನ್ನು ಸರ್ಕಾರಿ ಉತ್ಸವವಾಗಿ ರಾಜ್ಯ ಸರ್ಕಾರ ಘೋಷಿಸಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಬೈಂದೂರು ಧಾರ್ಮಿಕವಾಗಿ ಮತ್ತು ಪ್ರವಾಸೋದ್ಯಮಯಾಗಿ ಅಭಿವೃದ್ಧಿ ಸಾಧಿಸಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಬೈಂದೂರು ಉತ್ಸವದ ಮೂಲಕ ಇಡೀ ಕ್ಷೇತ್ರದ ವಿವಿಧ ಆಯಾಮಗಳ ಅಭಿವೃದ್ಧಿಯತ್ತ ಸರ್ಕಾರ ಹಾಗೂ ಸಂಘ ಸಂಸ್ಥೆಗಳ ಗಮನ ಸೆಳೆಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಬೋಜೆಗೌಡ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭ ಸಂಸದ ಬಿ ವೈ ರಾಘವೇಂದ್ರ ಹಾಗೂ ವೇದಿಕೆಯಲ್ಲಿದ್ದ ಗಣ್ಯರು ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು ಶಾಲು ಹೊದೆಸಿ ಸನ್ಮಾನಿಸಿದರು.

ಬೈಂದೂರು ಉತ್ಸವದ ಪ್ರಯುಕ್ತ ಬೈಂದೂರಿನ ಗಾಂಧಿ ಮೈದಾನದ ಪ್ರಧಾನ ವೇದಿಕೆಯ ಸುತ್ತ ನೂರಾರು ಮಳಿಗೆಗಳು ಜನರನ್ನು ಆಕರ್ಷಿಸಿದವು. ಮುಖ್ಯವಾಗಿ ಕೃಷಿಗೆ ಸಂಬಂಧಿಸಿದ ಉಪಕರಣಗಳ ಮಳಿಗೆಗಳು, ನರೇಗಾ ಮಳಿಗೆ, ಕೈಮಗ್ಗ, ಮೀನುಗಾರಿಕಾ ಇಲಾಖೆಯ ಮಾಹಿತಿ ಮಳಿಗೆಗಳು, ಪುಸ್ತಕ ಮಳಿಗೆಗಳು, ಗ್ರಾಮೀಣ ಭಾಗಗಳ ಆಹಾರ ಪದಾರ್ಥಗಳ ಮಳಿಗೆಗಳು, ಅರಣ್ಯ ಇಲಾಖೆ ಸೃಷ್ಟಿಸಿದ ಕೃತಕ ಅರಣ್ಯ ಲೋಕ ಜಾಂಬೂರಿ “ಕುಂಬ್ರಿಕಾನು” ಗಮನ ಸೆಳೆಯಿತು.

ಕುಂದಾಪುರ ಶಾಸಕ ಎ. ಕಿರಣ್‌ಕುಮಾರ್ ಕೊಡ್ಗಿ, ಉದ್ಯಮಿ ನಿತಿನ್ ನಾರಾಯಣ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗ, ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ ಶೆಟ್ಟಿ, ಕುಂದಾಪುರ ಉಪವಿಭಾಗಾಕಾರಿ ಮಹೇಶ್ಚಂದ್ರ, ಬೈಂದೂರು ತಹಶೀಲ್ದಾರ್ ಪ್ರದೀಪ್, ಬೈಂದೂರು ತಾ.ಪಂ. ಕಾರ್ಯನಿರ್ವಹಣಾಕಾರಿ ಭಾರತಿ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರರ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಲಯ ಅರಣ್ಯಾಕಾರಿ ಸಂದೇಶ್,  ಜಯಾನಂದ ಹೋಬಳಿದಾರ್, ಡಾ. ಅತುಲ್‌ಕುಮಾರ ಶೆಟ್ಟಿ, ಕೃಷ್ಣಪ್ರಸಾದ ಅಡ್ಯಂತಾಯ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ, ಕುಂದಾಪುರ ತಾಲೂಕು ಆರೋಗ್ಯಾಕಾರಿ ಡಾ. ಪ್ರೇಮಾನಂದ, ರಾಜೇಶ್ ಕಾವೇರಿ, ಸದಾನಂದ ಉಪ್ಪಿನಕುದ್ರು, ಉತ್ಸವದ ಸಹಸಂಚಾಲಕ ಶ್ರೀಗಣೇಶ್ ಉಪ್ಪುಂದ, ಕರಣ್ ಪೂಜಾರಿ, ಪುಷ್ಪರಾಜ ಶೆಟ್ಟಿ, ಸುರೇಶ ಬಟ್ವಾಡಿ ಮತ್ತಿತರರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!