ಬೈಂದೂರು: ಕರ್ನಾಟಕ ರಾಜ್ಯ ಸರ್ಕಾರೀ ನೌಕರರ ಸಂಘದ ಬೈಂದೂರು ಘಟಕಾಧ್ಯಕ್ಷ ಸ್ಥಾನಕ್ಕೆ ಮನೋರಾಜ್ ಶೆಟ್ಟಿ ನಾಮಪತ್ರ

ಬೈಂದೂರು: ಇತ್ತೀಚೆಗಷ್ಟೇ ರಾಜ್ಯದಾದ್ಯಂತ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಧೀಕ್ಷಕ ಮನೋರಾಜ್ ಜೆ ಶೆಟ್ಟಿಯವರು ಬೈಂದೂರು ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಇಲ್ಲಿವರೆಗೆ ಶಿಕ್ಷಕರದ್ದೇ ಪಾರುಪತ್ಯವಿದ್ದ ಬೈಂದೂರು ಘಟಕದ ಸರ್ಕಾರಿ ನೌಕರರ ಸಂಘಕ್ಕೆ ಶಿಕ್ಷಕರಲ್ಲದ ಆದರೆ ಶಿಕ್ಷಣ ಇಲಾಖೆಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಮನೋರಾಜ್ ಶೆಟ್ಟಿ ಸ್ಪರ್ಧೆ ಕುತೂಹಲ ಕೆರಳಿಸಿದೆ. ಅಲ್ಲದೇ ಮನೋರಾಜ್ ಶೆಟ್ಟಿ ತನ್ನ ಕಾರ್ಯವ್ಯಾಪ್ತಿಯಲ್ಲಿ ಶಿಕ್ಷಕರಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದರಲ್ಲದೇ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ತನ್ನನ್ನು ತೊಡಗಿಸಿಕೊಳ್ಳುವ ಮೂಲಕ ಇತರ ಇಲಾಖೆಗಳ ನೌಕರರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎನ್ನಲಾಗಿದೆ.
ಇದಿಂದಾಗಿ ಬಹುತೇಕ ಶಿಕ್ಷಣ ಇಲಾಖೆಯಿಂದ ಹಾಗೂ ಇತರ ಇಲಾಖೆಗಳಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆಯಾದ ನಿರ್ದೇಶಕರುಗಳು ಮನೋರಾಜ್ ಶೆಟ್ಟಿಯವರನ್ನು ಬೆಂಬಲಿಸುವ ಎಲ್ಲಾ ಸೂಚನೆಗಳು ಕಂಡುಬರುತ್ತಿದ್ದು, ಚುನಾವಣೆಯಲ್ಲಿ ಫಲಿತಾಂಶ ಏನಾಗಬಹುದು ಎನ್ನುವ ಕುತೂಹಲ ಹೆಚ್ವಾಗಿದೆ.