BlogCulturalEducationEntertainmentFashionHighlightsLifestyleLocal newsOthersTop StoriesTrending

ಉಡುಪಿ: ಜಿಲ್ಲಾ ಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ

Aware others:

ಉಡುಪಿ: ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಸಂಸ್ಮರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಯುವ ಬರಹಗಾರರ ಬಳಗ(ರಿ.) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ನಗರದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಪ್ರಥಮ ಕವಿಗೋಷ್ಠಿಗೆ ಉಡುಪಿ ಜಿಲ್ಲೆಯ ಆಸಕ್ತ ಕವಿ-ಕವಯಿತ್ರಿಯರಿಂದ ಕವನಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಜಿ.ಎಸ್. ಕಿರಣ್ ಕುಮಾರ್ ತಿಳಿಸಿದ್ದಾರೆ.

ಈ ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವ ಜಿಲ್ಲೆಯ ಯಾವುದೇ ವಯೋಮಾನದ ಆಸಕ್ತ ಕವಿ-ಕವಯಿತ್ರಿಯರು ಯಾವುದೇ ವಸ್ತು ವಿಷಯ ಕುರಿತು ರಚಿಸಿದ, ತಮ್ಮ ಸ್ವ-ರಚಿತ 20 ಸಾಲುಗಳ ಮಿತಿಯೊಳಗಿನ ಎರಡು ಕವಿತೆಗಳು / ಗಜಲ್ ಗಳನ್ನು ಅಥವಾ 6 ಸಾಲಿನ ಮಿತಿಯೊಳಗಿನ ಆರು ಚುಟುಕು / ಹನಿಗವಿತೆಗಳನ್ನು ಕಳುಹಿಸಿಕೊಡಬೇಕು. ಆಯ್ಕೆಯಾದ ಕವಿತೆಗಳ ಕವಿಗಳಿಗೆ ಜಿಲ್ಲಾ ಮಟ್ಟದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಅವಕಾಶ ಮಾಡಿಕೊಡಲಾಗುವುದು. ಜೊತೆಗೆ ಭಾಗವಹಿಸುವ ಎಲ್ಲಾ ಕವಿಗಳಿಗೂ ಬಳಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಕವಿಗಳು ತಮ್ಮ ಕವಿತೆಗಳನ್ನು ನವೆಂಬರ್ 30ರೊಳಗೆ  ತಲುಪುವಂತೆ ಸ್ವರಚಿತ ಎರಡು ಕವಿತೆಗಳನ್ನು ತಮ್ಮ ಸಂಕ್ಷಿಪ್ತ ಪರಿಚಯದೊಂದಿಗೆ ಜಿ.ಎಸ್. ಕಿರಣ್ ಕುಮಾರ್, ಜಿಲ್ಲಾಧ್ಯಕ್ಷರು, ಕರ್ನಾಟಕ ಯುವ ಬರಹಗಾರರ ಬಳಗ(ರಿ.), ಉಡುಪಿ, ಶ್ರೀ ಅನ್ನಪೂರ್ಣೇಶ್ವರಿ ನಿಲಯ, ಬೊಬ್ಬರ್ಯ ದೈವಸ್ಥಾನ ರಸ್ತೆ, ಉಪ್ಪಿನಕುದ್ರು, ಕುಂದಾಪುರ ತಾಲ್ಲೂಕು – 576230 ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9591217410 / 8152055770 ಅಥವಾ ksywamudupi1624@gmail.com ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


Aware others:

Leave a Reply

Your email address will not be published. Required fields are marked *

error: Content is protected !!