ಕೋಟ: ಹೆಜ್ಜೇನು ದಾಳಿ – ಐವರು ಗಂಭೀರ
ಕುಂದಾಪುರ: ಹೆಜ್ಜೇನು ದಾಳಿಗೆ ಐವರು ಗಂಭೀರಗೊಂಡ ಘಟನೆ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಕಲ್ಲು ಕೆಲಸದ ಮೇಸ್ತ್ರಿ ಹಾಜಿ ಇಬ್ರಾಹಿಂ ಪಾರಂಪಳ್ಳಿ, ಕಾರ್ಮಿಕರಾದ ಮೊಹಮ್ಮದ್ ಪಾರಂಪಳ್ಳಿ, ಪ್ರಭಾಕರ, ಶೇಖರ್ ಪೂಜಾರಿ ದಾಳಿಗೊಳಗಾದವರು ಎಂದು ಗುರುತಿಸಲಾಗಿದೆ.
ಕೋಟ ಮಣೂರಿನಲ್ಲಿ ಕಾಂಪೌಂಡ್ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದೆ. ಜೇನ್ನೊಣಗಳ ಕಡಿತಕ್ಕೊಳಗಾದ ಐವರೂ ರಸ್ತೆಗೆ ಓಡಿ ಬಂದಿದ್ದರಿಂದ ಪ್ರಾಣಪಾಯದಿಂದ ಪಾರಾಗಿದ್ದು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.