ಕೋಟ: ಅಮೃತೇಶ್ವರಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ,ಕಾಂಗ್ರೆಸ್ ಮುಖಂಡ ಗಣೇಶ್ ಕೆ ನೆಲ್ಲಿಬೆಟ್ಟು ರಿಗೆ ಮಾತೃ ವಿಯೋಗ
ಕೋಟ: ಬ್ಲಾಕ್ ಕಾಂಗ್ರೆಸ್ ಇದರ ಸಕ್ರಿಯ ಕಾರ್ಯಕರ್ತರು ಹಾಗೂ ಕೋಟ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಗಣೇಶ್ ಕೆ ನೆಲ್ಲಿಬೆಟ್ಟು ಇವರ ತಾಯಿ ಗೌರಿ ಭಾನುವಾರ ಮಧ್ಯಾಹ್ನ ನಿಧನ ಹೊಂದಿದರು.

ಗೌರಿಯವರ ನಿಧನಕ್ಕೆ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಸಿಬ್ಬಂದಿ ವರ್ಗ ಹಾಗೂ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಊರಿನ ಗಣ್ಯಾತಿ ಗಣ್ಯರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದರು.