BlogCulturalEconomyFashionHuman storiesLifestyleLocal newsNational NewsOthersPoliticsSuccess storiesTop StoriesTrendingWomen Care

ಕೊಡ್ಲಾಡಿ: ಆರೆಸ್ಸೆಸ್ ಗೆ 100 ವರ್ಷ – ದೇವಿ ನೆಲೆ-ನಮ್ಮ ಮನೆ ಯೋಜನೆಗೆ ಚಾಲನೆ

Aware others:

ಕುಂದಾಪುರ:  ರಾಷ್ಟ್ರೀಯ ಸ್ವಯಂಸೇವಕ ಸಂಘವು ನೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ದಾನಿಗಳು ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಕ್ಷೇತ್ರದ 100 ಅಶಕ್ತರಿಗೆ ‘ದೇವಿ ನೆಲೆ-ನಮ್ಮ ಮನೆ’ ಎಂಬ ಹೆಸರಿನಲ್ಲಿ ಸೂರು ನಿರ್ಮಿಸುವ ಯೋಜನೆಗೆ ಡಿ.1ರಂದು  ಚಾಲನೆ ದೊರೆಯಿತು.

ಕೊಡ್ಲಾಡಿ ಗ್ರಾಮದ ಮಾರ್ಡಿ ಶಾಲಾ ಮೈದಾನದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಗುರುಪುರದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿ, ಹಿಂದುಗಳು ಒಂದಾಗುವ ಜತೆಗೆ ಅಶಕ್ತರಿಗೆ ‌ಎಲ್ಲ ರೀತಿಯಲ್ಲೂ ನೆರವಾಗಲು ಇಡೀ‌ ಸಮಾಜವೇ ಮುಂದೆ ಬರಬೇಕು. ಆರೆಸ್ಸೆಸ್ 100 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ  ಇಲ್ಲಿನ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಮುಂದಾಳತ್ವದಲ್ಲಿ ಕಾರ್ಯಕರ್ತರು, ದಾನಿಗಳು, ಹಿತೈಷಿಗಳು ಅರ್ಥಪೂರ್ಣ ಸಂಕಲ್ಪ ಮಾಡಿದ್ದಾರೆ. ರಾಮ ರಾಜ್ಯದ ಪರಿಕಲ್ಪನೆಯ ಭಾಗವಾಗಿ ಪ್ರತಿಯೊಬ್ಬರು ಸ್ವಂತ ಮನೆ ಹೊಂದಬೇಕು. ಈ ನಿಟ್ಟಿನಲ್ಲಿ ದೇವಿ ನೆಲೆ-ನಮ್ಮ ಮನೆ ಸಂಕಲ್ಪ ಸಾಕಾರವಾಗಲಿ ಎಂದು ಹಾರೈಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಕಾರ್ಯವಾಹ  ಪಿ. ಎಸ್. ಪ್ರಕಾಶ್ ಮಾತನಾಡಿ, ಸಂಘ ನೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ತೆಗೆದುಕೊಂಡಿರುವ ಪ್ರಮುಖ ಯೋಜನೆ, ಸಂಘದ ಕಾರ್ಯ ವಿಸ್ತಾರದ ಬಗ್ಗೆ ಬೆಳಕು‌ ಚೆಲ್ಲಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಗುರುರಾಜ್ ಗಂಟಿಹೊಳೆ, ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಈಗಾಗಲೇ ಹಲವು ಯೋಜನೆಗಳನ್ನು‌ ಹಾಕಿಕೊಂಡು ಅನುಷ್ಠಾನ ಮಾಡುತ್ತಿದ್ದೇವೆ.‌ ದೇವಿ ನೆಲೆ-ನಮ್ಮ ಮನೆ ಯೋಜನೆಯೂ ಅರ್ಥಪೂರ್ಣವಾಗಿದ್ದು, ಪ್ರಸ್ತುತ ಇದರ ಅವಶ್ಯಕತೆಯೂ ಹೆಚ್ಚಿದೆ. ಅಶಕ್ತರಿಗೆ ಮನೆ ನಿರ್ಮಾಣ ಆಗಲೇ ಬೇಕು. ಇದಕ್ಕೆ ಇಡೀ‌ ಸಮಾದ ಸಹಕಾರ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ರಾಜಾರಾಮ ಭಟ್ ಸೊರಬ, ಕೆ.ಪಿ ಶೆಟ್ಟಿ, ಕೃಷ್ಣಪ್ರಸಾದ ಅಡ್ಯಂತಾಯ, ಬಾಲಚಂದ್ರ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಸುಭಾಸ್ ಶೆಟ್ಟಿ ಕೊಡ್ಲಾಡಿ, ಗಣೇಶ್ ಪೂಜಾರಿ ಹಟ್ಟಿಯಂಗಡಿ, ಡಾ. ಅತುಲ್ ಕುಮಾರ್ ಶೆಟ್ಟಿ, ಪ್ರವೀಣ್ ಶೆಟ್ಟಿ ಕೊಡ್ಲಾಡಿ, ರೋಹಿತ್ ಶೆಟ್ಟಿ ಉಳ್ಳೂರು, ಶೇಖರ ಖಾರ್ವಿ ಕಿರಿಮಂಜೇಶ್ವರ ಮೊದಲಾದವರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!