ಕೋಟೇಶ್ವರ: ಕಾರು ಡಿಕ್ಕಿ – ಪಾದಚಾರಿ ಗಂಭೀರ

ಕುಂದಾಪುರ: ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಪಾದಾಚಾರಿಯೊಬ್ಬರಿಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಪಾದಾಚಾರಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಹಾಲಾಡಿ ರಸ್ತೆಯ ಪ್ರೀತಂ ಬಾರ್ ಎದುರುಗಡೆ ನಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿ ತಲುಪಿದ ವ್ಯಕ್ತಿಯನ್ನು ಗುಲ್ವಾಡಿ ನಿವಾಸಿ ಶಶಿಧರ (59) ಎಂದು ಗುರುತಿಸಲಾಗಿದೆ. ಶಶಿಧರ ಅವರು ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಗಂಭೀರಗೊಂಡವರನ್ನು ಕುಂದಾಪುರ ಸರ್ಕಾರೀ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ