AccidentBlogCrime newsGovernmentHealthHighlightsHuman storiesLifestyleLocal newsObituaryOthersSportsState newsTop StoriesTrending

ತ್ರಾಸಿ: ಸಮುದ್ರದಲ್ಲಿ ನಾಪತ್ತೆಯಾಗಿದ್ದ ಜಸ್ಕಿ ರೈಡರ್ ರೋಹಿದಾಸ್ ಮೃತದೇಹ ಪತ್ತೆ

Aware others:

ಕುಂದಾಪುರ: ಶನಿವಾರ ಸಂಜೆ ಪ್ರವಾಸಿಗನೊಬ್ಬನನ್ನು ಕರೆದೊಯದ್ಯದ್ದ ಜಸ್ಕಿ ಸ್ಪೀಡ್ ಬೋಟ್ ಮಗುಚಿ ನಾಪತ್ತೆಯಾಗಿದ್ದ ರೈಡರ್ ರೋಹಿದಾಸ್ ಯಾನೆ ರವಿ (41) ಮೃತದೇಹ ಸೋಮವಾರ ಬೆಳಿಗ್ಗೆ ಸುಮಾರು 3 ಗಂಟೆಯ ಜಾವಕ್ಕೆ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಶನಿವಾರ ಬೆಂಗಳೂರು ಮೂಲದ ಪ್ರಶಾಂತ್ ಎಂಬುವರು ಜಸ್ಕಿ ರೈಡರ್ ರೋಹಿದಾಸ್ ಎಂಬುವರ ಸ್ಪೀಡ್ ಬೋಟಿನಲ್ಲಿ ತ್ರಾಸಿ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆ ತೆರಳಿದ್ದರು. ಈ ಸಂದರ್ಭ ಬೋಟ್  ಮಗುಚಿ ರೈಡರ್ ರವಿ ನಾಪತ್ತೆಯಾಗಿದ್ದರು.  ಇದೀಗ 36 ಗಂಟೆಗಳ ಬಳಿಕ ತ್ರಾಸಿ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ರವಿ ದೇಹ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗೂ ಮೋಹನ ಖಾರ್ವಿ ಇವರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಗಮನಿಸಿ, ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿ ಗೆ ಮಾಹಿತಿ ನೀಡಿದ್ದಾರೆ. ನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ದಡಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು. ಗಂಗೊಳ್ಳಿ 24x 7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ ಗಂಗೊಳ್ಳಿ, ಕೆ ಎನ್ ಡಿ  ಸಿಬ್ಬಂಧಿ ನಿಶಾಂತ್ ಖಾರ್ವಿ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಮೃತ ರೊಹಿದಾಸ್ ಸಹೋದ್ಯೋಗಿಗಳು ಶವವನ್ನು ತೀರದಿಂದ ಸಾಗಿಸಲು ಸಹಕರಿಸಿದರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ ಶವವನ್ನು ಇಬ್ರಾಹಿಂ ಗಂಗೊಳ್ಳಿ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯ ಶೀತಲೀಕರಣ ಘಟಕಕ್ಕೆ ಕೊಂಡೊಯ್ದಿದ್ದಾರೆ..


Aware others:

Leave a Reply

Your email address will not be published. Required fields are marked *

error: Content is protected !!