BlogEducationEntertainmentFashionHighlightsHuman storiesLifestyleLocal newsOthersState newsSuccess storiesTop StoriesTrendingWomen Care

ಕುಂದಾಪುರ: ಉಡುಪಿ ಜಿಲ್ಲಾ 10ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಮನ್ವಿತಾ ಎಸ್ ಆಯ್ಕೆ

Aware others:

ಕುಂದಾಪುರ: ಈ ಬಾರಿಯ ಉಡುಪಿ ಜಿಲ್ಲಾ 10ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಮನ್ವಿತಾ ಎಸ್ ಆಯ್ಕೆಯಾಗಿದ್ದಾರೆ.

ಅತೀ ಚಿಕ್ಕ ವಯಸ್ಸಿನಲ್ಲಿಯೇ ಕಲೆಯಲ್ಲಿ ಆಸಕ್ತಿ ಹೊಂದಿದ್ದ ಮನ್ವಿತಾ ಎಸ್ ಅವರು ಸೂರ್ಯಕಾಂತ ಬಿ. ಬಸ್ರೂರು ಹಾಗೂ ಲತಾ ದಂಪತಿಗಳ ಪುತ್ರಿ. ತನ್ನ 4ನೇ ವಯಸ್ಸಿಗೆ ಯಕ್ಷಗಾನ ಗೆಜ್ಜೆ ಕಟ್ಟಿ ವೇದಿಕೆ ಏರಿ ನೃತ್ಯ ಪ್ರದರ್ಶನ ನೀಡಿದ್ದ ಮನ್ವಿತಾ, ಭರತನಾಟ್ಯ ಜ್ಯೂನಿಯರ್ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಸಿನಿಯರ್ ವಿಭಾಗದಲ್ಲಿ ತರಭೇತಿ ಮುಂದುವರಿಸಿದ್ದಾಳೆ. ಭಾಷಣ ಮತ್ತು ಕಾರ್ಯಕ್ರಮ ನಿರೂಪಣೆ ಈಕೆಯ ಪ್ರೀತಿಯ ಕ್ಷೇತ್ರವಾಗಿದ್ದು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡು ಜಿಲ್ಲಾ ಮಟ್ಟಕ್ಕೂ  ಆಯ್ಕೆಯಾಗಿದ್ದಾಳೆ.

2023-24 ನೇ ಸಾಲಿನ ಮಕ್ಕಳ ಜಿಲ್ಲಾ ಸಾಹಿತ್ಯ ಸಮ್ಮೇಳನದ  ಉದ್ಘಾಟನಾ ಸಮಾರಂಭದ ನಿರೂಪಕಿಯಾಗಿ ಜನಮನ್ನಣೆಗೆ ಪಾತ್ರವಾಗಿದ್ದಾಳೆ. ಕುಂದಾಪುರ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನ “ತಾರ್ಕಣಿ-2024” ರ ಪ್ರಯುಕ್ತ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದ ಮನ್ವಿತಾ, ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಸುವಿಕೆ, ಹೊಂಬೆಳಕು ಪುಸ್ತಕ ಬಿಡುಗಡೆಯಂತಹ ಹಲವಾರು ಕಾರ್ಯಕ್ರಮಗಳಲ್ಲಿ ಪ್ರಮುಖ ಭಾಷಣಕಾರ್ತಿಯಾಗಿ ಜನ ಮೆಚ್ಚುಗೆ ಪಡಿದಿದ್ದಾಳೆ. ವಿಶೇಷವಾಗಿ ಕಾರಂತ ಪ್ರತಿಷ್ಠಾನ ನೀಡಲ್ಪಡುವ ಬಾಲಪುರಸ್ಕಾರಕ್ಕೂ ಆಯ್ಕೆಯಾಗಿದ್ದಾಳೆ.


Aware others:

Leave a Reply

Your email address will not be published. Required fields are marked *

error: Content is protected !!